ಕತಾರ್: ಕತಾರ್ ನ ರಾಜಧಾನಿ ದೋಹಾದಲ್ಲಿ ದಕ್ಷಿಣ ಭಾರತದ 8ನೇ ಅಂತರಾಷ್ಟ್ರೀಯ ವರ್ಣರಂಜಿತ ಸಮಾರಂಭ ನಡೆದಿದ್ದು 2019ರ ಸೈಮಾ ಪ್ರಶಸ್ತಿ ಘೋಷಣೆಯಾಗಿದೆ.
ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ಯಶ್, ಕನ್ನಡ ಚಿತ್ರವೊಂದು ದೇಶದಾದ್ಯಂತ ಸುದ್ದಿ ಮಾಡಿದ್ದಕ್ಕೆ ಸಂಭ್ರಮಿಸಿದರು. ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿಯನ್ನು ರವಿ ಬಸ್ರೂರ್ ಸ್ವೀಕರಿಸಿದರೆ, ಭುವನ್ ಗೌಡ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಗೆದ್ದರು. ಕೆಜಿಎಫ್ ಚಿತ್ರದ “ಸಲಾಂ ರಾಖಿ ಭಾಯ್” ಚಿತ್ರದ ಸಮೂಹಗೀತೆಗಾಗಿ ವಿಜಯಪ್ರಕಾಶ್ ಮತ್ತಿತರರು ಪ್ರಶಸ್ತಿ ಪಡೆದರು.
ಟಗರು ಚಿತ್ರದ ಹಿನ್ನೆಲೆ ಗಾಯನಕ್ಕಾಗಿ ಅನುರಾಧಾ ಭಟ್, ಚೊಚ್ಚಲ ಚಿತ್ರದ ನಟನೆಗಾಗಿ ಡ್ಯಾನಿಶ್ ಸೇಠ್, ಅತ್ಯುತ್ತಮ ಚೊಚ್ಚಲ ಚಿತ್ರ ನಿರ್ದೇಶನಕ್ಕಾಗಿ “ಅಯೋಗ್ಯ” ಚಿತ್ರದ ಮಹೇಶ್ ಕುಮಾರ್ ಮತ್ತು ಅಯೋಗ್ಯ ಚಿತ್ರದ ಗೀತರಚೆನಗಾಗಿ ಚೇತನ್ ಕುಮಾರ್ ಪ್ರಶಸ್ತಿ ಗೆದ್ದು ವೇದಿಕೆಯಲ್ಲಿ ಸಂಭ್ರಮಿಸಿದರು. “ಆ ಕರಾಳ ರಾತ್ರಿ” ಚಿತ್ರದ ನಟನೆಗಾಗಿ ಅನುಪಮಾ ಗೌಡ ಪ್ರಶಸ್ತಿ ಗೆದ್ದರು.
ಅತ್ಯುತ್ತಮ ಸಿನಿಮಾ ಕೆಜಿಎಫ್
ಅತ್ಯುತ್ತಮ ನಟ ಯಶ್ (ಕೆಜಿಎಫ್)
ಅತ್ಯುತ್ತಮ ನಟಿ ರಚಿತಾ ರಾಮ್ (ಅಯೋಗ್ಯ)
ಅತ್ಯುತ್ತಮ ನಿರ್ದೇಶಕ ಪ್ರಶಾಂತ್ ನೀಲ್ (ಕೆಜಿಎಫ್)
ಅತ್ಯುತ್ತಮ ಖಳ ನಟ ಧನಂಜಯ್ (ಟಗರು)
ಅತ್ಯುತ್ತಮ ನವ ನಟಿ ಅನುಪಮ ಗೌಡ (ಆ ಕರಾಳ ರಾತ್ರಿ)
ಅತ್ಯುತ್ತಮ ನವ ನಿರ್ದೇಶಕ ಮಹೇಶ್ ಕುಮಾರ್ (ಅಯೋಗ್ಯ)
ಅತ್ಯುತ್ತಮ ಗೀತರಚನೆ ಚೇತನ್ ಕುಮಾರ್ (ಏನಮ್ಮಿ ಏನಮ್ಮಿ)
ಅತ್ಯುತ್ತಮ ಪೋಷಕ ನಟ ಪ್ರಕಾಶ್ ಕೆ ತುಮಿನಾಡು (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು)
ಅತ್ಯುತ್ತಮ ಪೋಷಕ ನಟಿ ಅರ್ಚನಾ (ಕೆಜಿಎಫ್)
ಅತ್ಯುತ್ತಮ ಗಾಯಕಿ ಅನನ್ಯ ಭಟ್ (ಹೋಲ್ಡನ್..ಹೋಲ್ಡನ್..)
ಅತ್ಯುತ್ತಮ ಛಾಯಾಗ್ರಾಹಕ ಭುವನ್ ಗೌಡ (ಕೆಜಿಎಫ್)
ಅತ್ಯುತ್ತಮ ಸಂಗೀತ ನಿರ್ದೇಶಕ ರವಿ ಬಸ್ರೂರ್ (ಕೆಜಿಎಫ್)
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…