ಕದ್ರಿ ದೇವಸ್ಥಾನಕ್ಕೂ ಬಾಂಬ್ ಇಡಲು ಯತ್ನಿಸಿದ್ದನೇ ಶಂಕಿತ ವ್ಯಕ್ತಿ ? Vishwanews24
ಮಂಗಳೂರು: ಸೋಮವಾರ ಬೆಳಿಗ್ಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ವ್ಯಕ್ತಿ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೂ ಹೋಗಲು ಯತ್ನಿಸಿದ್ದ ಎಂಬ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಆರೋಪಿಯು ಕೆಂಜಾರುವರೆಗೆ ನಗರ ಸಾರಿಗೆ ಬಸ್ ನಲ್ಲಿ ಬಂದಿದ್ದ. ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಬೇರೆ ವಾಹನದಲ್ಲಿ ಬಂದಿದ್ದ. ಬಾಂಬ್ ಇರಿಸಿ ನಡೆದುಕೊಂಡೇ ಕೆಂಜಾರುವರೆಗೆ ಬಂದಿದ್ದ ಎಂಬುದೂ ಗೊತ್ತಾಗಿದೆ.
ಆಟೊ ಚಾಲಕ ಹೇಳಿದ ಮೊತ್ತಕ್ಕೆ ಒಪ್ಪದೇ ಕಾವೂರುವರೆಗೆ ಮಾತ್ರ ಆಟೊದಲ್ಲಿ ಹೋಗಿ ಅಲ್ಲಿ ಇಳಿದು ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆಟೊ ಚಾಲಕನನ್ನು ಪತ್ತೆ ಮಾಡಿದ್ದು ತೀವ್ರ ವಿಚಾರಣೆ ನಡೆಸಿದ್ದು ತನಿಖಾ ತಂಡಕ್ಕೆ ಚಾಲಕ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ತುಳು ಭಾಷಿಕ?: ಶಂಕಿತ ವ್ಯಕ್ತಿಯು ತುಳು ಭಾಷೆಯಲ್ಲೇ ತನ್ನೊಂದಿಗೆ ಮಾತನಾಡಿದ್ದಾನೆ. ವಾಪಸ್ ಹೋಗುವಾಗಲೂ ಆತನ ಬಳಿ ಒಂದು ಬ್ಯಾಗ್ ಇತ್ತು ಎಂಬ ಮಾಹಿತಿಯನ್ನೂ ಆಟೊ ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ.
