ಮಂಗಳೂರು: ಸೋಮವಾರ ಬೆಳಿಗ್ಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ವ್ಯಕ್ತಿ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೂ ಹೋಗಲು ಯತ್ನಿಸಿದ್ದ ಎಂಬ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಆರೋಪಿಯು ಕೆಂಜಾರುವರೆಗೆ ನಗರ ಸಾರಿಗೆ ಬಸ್ ನಲ್ಲಿ ಬಂದಿದ್ದ. ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಬೇರೆ ವಾಹನದಲ್ಲಿ ಬಂದಿದ್ದ. ಬಾಂಬ್ ಇರಿಸಿ ನಡೆದುಕೊಂಡೇ ಕೆಂಜಾರುವರೆಗೆ ಬಂದಿದ್ದ ಎಂಬುದೂ ಗೊತ್ತಾಗಿದೆ.
ಆಟೊ ಚಾಲಕ ಹೇಳಿದ ಮೊತ್ತಕ್ಕೆ ಒಪ್ಪದೇ ಕಾವೂರುವರೆಗೆ ಮಾತ್ರ ಆಟೊದಲ್ಲಿ ಹೋಗಿ ಅಲ್ಲಿ ಇಳಿದು ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆಟೊ ಚಾಲಕನನ್ನು ಪತ್ತೆ ಮಾಡಿದ್ದು ತೀವ್ರ ವಿಚಾರಣೆ ನಡೆಸಿದ್ದು ತನಿಖಾ ತಂಡಕ್ಕೆ ಚಾಲಕ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ತುಳು ಭಾಷಿಕ?: ಶಂಕಿತ ವ್ಯಕ್ತಿಯು ತುಳು ಭಾಷೆಯಲ್ಲೇ ತನ್ನೊಂದಿಗೆ ಮಾತನಾಡಿದ್ದಾನೆ. ವಾಪಸ್ ಹೋಗುವಾಗಲೂ ಆತನ ಬಳಿ ಒಂದು ಬ್ಯಾಗ್ ಇತ್ತು ಎಂಬ ಮಾಹಿತಿಯನ್ನೂ ಆಟೊ ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…