ಮಂಗಳೂರು: ಸೋಮವಾರ ಬೆಳಿಗ್ಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ವ್ಯಕ್ತಿ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೂ ಹೋಗಲು ಯತ್ನಿಸಿದ್ದ ಎಂಬ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಆರೋಪಿಯು ಕೆಂಜಾರುವರೆಗೆ ನಗರ ಸಾರಿಗೆ ಬಸ್ ನಲ್ಲಿ ಬಂದಿದ್ದ. ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಬೇರೆ ವಾಹನದಲ್ಲಿ ಬಂದಿದ್ದ. ಬಾಂಬ್ ಇರಿಸಿ ನಡೆದುಕೊಂಡೇ ಕೆಂಜಾರುವರೆಗೆ ಬಂದಿದ್ದ ಎಂಬುದೂ ಗೊತ್ತಾಗಿದೆ.
ಆಟೊ ಚಾಲಕ ಹೇಳಿದ ಮೊತ್ತಕ್ಕೆ ಒಪ್ಪದೇ ಕಾವೂರುವರೆಗೆ ಮಾತ್ರ ಆಟೊದಲ್ಲಿ ಹೋಗಿ ಅಲ್ಲಿ ಇಳಿದು ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆಟೊ ಚಾಲಕನನ್ನು ಪತ್ತೆ ಮಾಡಿದ್ದು ತೀವ್ರ ವಿಚಾರಣೆ ನಡೆಸಿದ್ದು ತನಿಖಾ ತಂಡಕ್ಕೆ ಚಾಲಕ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ತುಳು ಭಾಷಿಕ?: ಶಂಕಿತ ವ್ಯಕ್ತಿಯು ತುಳು ಭಾಷೆಯಲ್ಲೇ ತನ್ನೊಂದಿಗೆ ಮಾತನಾಡಿದ್ದಾನೆ. ವಾಪಸ್ ಹೋಗುವಾಗಲೂ ಆತನ ಬಳಿ ಒಂದು ಬ್ಯಾಗ್ ಇತ್ತು ಎಂಬ ಮಾಹಿತಿಯನ್ನೂ ಆಟೊ ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…