Featured

ಕನಕ ಜಯಂತಿ ನಾಡಹಬ್ಬ ಆಗಬೇಕು : ಬಸವರಾಜ್ ಬೊಮ್ಮಾಯಿ -Vishwanews24

ಕನಕ ಜಯಂತಿ ನಾಡಹಬ್ಬ ಆಗಬೇಕು : ಬಸವರಾಜ್ ಬೊಮ್ಮಾಯಿ -Vishwanews24

ಉಡುಪಿ: ಭಕ್ತ ಕನಕದಾಸರ 533ನೇ ಜಯಂತಿಯನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಆಚರಿಸಲಾಯಿತು. ಮಣಿಪಾಲದಲ್ಲಿರುವ ರಜತಾದ್ರಿಯಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಈ ಬಾರಿ ಕೊರೊನ ಇರೋದರಿಂದ ಈ ಬಾರಿ ಸರಳವಾಗಿ ಆಚರಿಸಲಾಯಿತು. ಸಚಿವ ಬಸವರಾಜ್ ಬೊಮ್ಮಾಯಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, ಭಕ್ತನ ಭಕ್ತಿ ದೇವರಿಗಿಂತ ದೊಡ್ಡದು. ಕನಕದಾಸರು ಭಕ್ತನನ್ನು ಶ್ರೇಷ್ಠ ಎಂದು ಸಾಬೀತುಪಡಿಸಿದ್ದಾರೆ. ಅವರು ಸದಾ ಪ್ರಸ್ತುತ, ಕ್ರಾಂತಿಕಾರರು ಹಾಗೂ ಸಮಾಜಸುಧಾರಕರು ಹೌದು. ಕನಕ ಬಸವ ಬುದ್ಧ ಎಲ್ಲಾ ಕಾಲಕ್ಕೂ ಸಲ್ಲುವವರು. ಇವರ ವಿಚಾರವು ಕಾಲಾತೀತ. ಕನಕ ಜಯಂತಿ ನಾಡಹಬ್ಬ ಆಗಬೇಕು. ಅವರ ಪ್ರತಿ ವಿಚಾರ ಮನೆ-ಮನೆಗಳಲ್ಲಿ ಸ್ಥಾಪನೆಯಾಗಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಪ್ರೊಫೆಸರ್ ವರದೇಶ್ ಹಿರೇಗಂಗೆ ಮಾತನಾಡಿ, ಕನಕದಾಸರು ಈ ಕಾಲಕ್ಕೆ ಬಹಳ ಪ್ರಸ್ತುತರು. ಆಧ್ಯಾತ್ಮ ಚಿಂತನೆಯ ಮೂಲಕ ಮೇಲು-ಕೀಳು ಮತ್ತು ತಾರತಮ್ಯವನ್ನು ಹೋಗಲಾಡಿಸಲು ಪ್ರಯತ್ನಿಸಿದ ಮಹಾನುಭಾವರು. ಆಧ್ಯಾತ್ಮದ ಅಂತಿಮ ಗುರಿ ಏನಿದ್ದರೂ ಅದು ಸರ್ವಸಮಾನತೆ ಎಂದು ಕನಕದಾಸರು ಪ್ರತಿಪಾದಿಸಿದ್ದರು. ಕನಕದಾಸರು ಕಲಿಯೂ ಕವಿ, ಭಕ್ತ, ದಾಸ, ದಾರ್ಶನಿಕ, ಬಂಡಾಯಕಾರ ಹಾಗೂ ಸಮಾಜಸುಧಾರಕರೂ ಹೌದು ಎಂದರು.

ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಗದೀಶ್ ಅಧಿಕಾರಿ, ಉಡುಪಿಯ ಕುರುಬ ಸಂಘಟನೆಗಳು ಭಕ್ತ ಕನಕದಾಸರ ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

5 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

9 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

10 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

10 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

11 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

11 hours ago