Featured

ಕನಕ ಜಯಂತಿ ನಾಡಹಬ್ಬ ಆಗಬೇಕು : ಬಸವರಾಜ್ ಬೊಮ್ಮಾಯಿ -Vishwanews24

ಕನಕ ಜಯಂತಿ ನಾಡಹಬ್ಬ ಆಗಬೇಕು : ಬಸವರಾಜ್ ಬೊಮ್ಮಾಯಿ -Vishwanews24

ಉಡುಪಿ: ಭಕ್ತ ಕನಕದಾಸರ 533ನೇ ಜಯಂತಿಯನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಆಚರಿಸಲಾಯಿತು. ಮಣಿಪಾಲದಲ್ಲಿರುವ ರಜತಾದ್ರಿಯಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಈ ಬಾರಿ ಕೊರೊನ ಇರೋದರಿಂದ ಈ ಬಾರಿ ಸರಳವಾಗಿ ಆಚರಿಸಲಾಯಿತು. ಸಚಿವ ಬಸವರಾಜ್ ಬೊಮ್ಮಾಯಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, ಭಕ್ತನ ಭಕ್ತಿ ದೇವರಿಗಿಂತ ದೊಡ್ಡದು. ಕನಕದಾಸರು ಭಕ್ತನನ್ನು ಶ್ರೇಷ್ಠ ಎಂದು ಸಾಬೀತುಪಡಿಸಿದ್ದಾರೆ. ಅವರು ಸದಾ ಪ್ರಸ್ತುತ, ಕ್ರಾಂತಿಕಾರರು ಹಾಗೂ ಸಮಾಜಸುಧಾರಕರು ಹೌದು. ಕನಕ ಬಸವ ಬುದ್ಧ ಎಲ್ಲಾ ಕಾಲಕ್ಕೂ ಸಲ್ಲುವವರು. ಇವರ ವಿಚಾರವು ಕಾಲಾತೀತ. ಕನಕ ಜಯಂತಿ ನಾಡಹಬ್ಬ ಆಗಬೇಕು. ಅವರ ಪ್ರತಿ ವಿಚಾರ ಮನೆ-ಮನೆಗಳಲ್ಲಿ ಸ್ಥಾಪನೆಯಾಗಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಪ್ರೊಫೆಸರ್ ವರದೇಶ್ ಹಿರೇಗಂಗೆ ಮಾತನಾಡಿ, ಕನಕದಾಸರು ಈ ಕಾಲಕ್ಕೆ ಬಹಳ ಪ್ರಸ್ತುತರು. ಆಧ್ಯಾತ್ಮ ಚಿಂತನೆಯ ಮೂಲಕ ಮೇಲು-ಕೀಳು ಮತ್ತು ತಾರತಮ್ಯವನ್ನು ಹೋಗಲಾಡಿಸಲು ಪ್ರಯತ್ನಿಸಿದ ಮಹಾನುಭಾವರು. ಆಧ್ಯಾತ್ಮದ ಅಂತಿಮ ಗುರಿ ಏನಿದ್ದರೂ ಅದು ಸರ್ವಸಮಾನತೆ ಎಂದು ಕನಕದಾಸರು ಪ್ರತಿಪಾದಿಸಿದ್ದರು. ಕನಕದಾಸರು ಕಲಿಯೂ ಕವಿ, ಭಕ್ತ, ದಾಸ, ದಾರ್ಶನಿಕ, ಬಂಡಾಯಕಾರ ಹಾಗೂ ಸಮಾಜಸುಧಾರಕರೂ ಹೌದು ಎಂದರು.

ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಗದೀಶ್ ಅಧಿಕಾರಿ, ಉಡುಪಿಯ ಕುರುಬ ಸಂಘಟನೆಗಳು ಭಕ್ತ ಕನಕದಾಸರ ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago