ಲಕ್ನೋ: ಕನಸ್ಸಿನಲ್ಲಿ ಶ್ರೀರಾಮಚಂದ್ರ ಬರುತ್ತಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರಪ್ರದೇಶ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.
ಶಾಮ್ಲಿ ಜಿಲ್ಲೆಯ ಸದರ್ ಕೋತ್ವಾಲಿಯ ಹರೇಂದ್ರ ನಗರದ ನಿವಾಸಿ ಶಹಜಾದ್ ಕುಂಟುಬ ಬುಧವಾರ ಶಾಸ್ತ್ರೋಕ್ತವಾಗಿ ಹಿಂದೂ ಧರ್ಮವನ್ನು ಸ್ವೀಕರಿಸಿದೆ. ಇದಾದ ನಂತರ ಶ್ರೀರಾಮನ ದೇವಾಲಯಕ್ಕೆ ಪೂಜೆ ಸಲ್ಲಿಸಿ, ಹಿಂದೂ ಧರ್ಮಕ್ಕೆ ಬದಲಾದ ಬಳಿಕ ಶಹಜಾದ್ ತಮ್ಮ ಹೆಸರನ್ನು ಸಂಜು ಎಂದು ಮರು ನಾಮಕರಣವನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಜೈ ಶ್ರೀರಾಮ್ ಎನ್ನುವ ಘೋಷಣೆಯನ್ನು ಕೂಗಿದ್ದಾರೆ.
ಈ ಕುರಿತು ಮಾತನಾಡಿದ ಶಹಝಾದ್, ನನಗೆ ಹಲವು ದಿನಗಳಿಂದ ಕನಸಿನಲ್ಲಿ ಶ್ರೀರಾಮ ಬಂದು ಹಿಂದೂ ಧರ್ಮಕ್ಕೆ ಮತಾಂತರವಾಗಲು ಹೇಳುತ್ತಿದ್ದ. ನಮ್ಮ ಪೂರ್ವಜರನ್ನು ಬಲವಂತವಾಗಿ ಇಸ್ಲಾಮ್ ಧರ್ಮಕ್ಕೆ ಮತಾಂತರ ಮಾಡಲಾಗಿತ್ತು. ನಾನೀಗ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದೇನೆ. ನನಗೆ ಯಾವುದೇ ವ್ಯಕ್ತಿಗಳಾಗಲೀ ಸಂಘಟನೆಗಳಾಗಲೀ ಮತಾಂತರವಾಗುವಂತೆ ಬಲವಂತ ಮಾಡಿಲ್ಲ. ನಮ್ಮ ಸ್ವ ಇಚ್ಛೆಯಿಂದಲೇ ಮತಾಂತರವಾಗುತ್ತಿದ್ದೇವೆ ಎಂದು ಹೇಳಿದ್ದಾರೆ.
ನನ್ನ ಆರಾಧ್ಯ ದೈವ ಭಗವಾನ್ ಶ್ರೀರಾಮಚಂದ್ರ. ನಾನು ನನ್ನ ಮುಂದಿನ ದಿನಗಳನ್ನು ಹಿಂದೂ ಸಂಪ್ರದಾಯದಂತೆ ಅನುಸರಿಸುತ್ತೇನೆ ಎಂದು ಹೇಳಿದರು.ಈ ಬಗ್ಗೆ ಶಾಮ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಸಂಜು ಅಲಿಯಾಸ್ ಶಹಜಾದ್, ನಾನು ನನ್ನ ಸ್ವ-ಇಚ್ಛೆಯಿಂದ ಹಿಂದೂ ಧರ್ಮವನ್ನು ಸ್ವೀಕರಿಸಿದ್ದೇನೆ. ನನಗೆ ಹಿಂದೂ ಧರ್ಮಕ್ಕೆ ಮರಳಲು ಹಾಗೂ ಹಿಂದೂಗಳಂತೆ ಪೂಜೆ-ಪುನಸ್ಕಾರ ಸಲ್ಲಿಸಲು ಅನುಮತಿ ನೀಡಬೇಕೆಂದು ಕೋರಿಕೊಂಡಿದ್ದಾರೆ.
ಜಾಹೀರಾತುಗಳು
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…