ಲಕ್ನೋ: ಕನಸ್ಸಿನಲ್ಲಿ ಶ್ರೀರಾಮಚಂದ್ರ ಬರುತ್ತಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರಪ್ರದೇಶ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.
ಶಾಮ್ಲಿ ಜಿಲ್ಲೆಯ ಸದರ್ ಕೋತ್ವಾಲಿಯ ಹರೇಂದ್ರ ನಗರದ ನಿವಾಸಿ ಶಹಜಾದ್ ಕುಂಟುಬ ಬುಧವಾರ ಶಾಸ್ತ್ರೋಕ್ತವಾಗಿ ಹಿಂದೂ ಧರ್ಮವನ್ನು ಸ್ವೀಕರಿಸಿದೆ. ಇದಾದ ನಂತರ ಶ್ರೀರಾಮನ ದೇವಾಲಯಕ್ಕೆ ಪೂಜೆ ಸಲ್ಲಿಸಿ, ಹಿಂದೂ ಧರ್ಮಕ್ಕೆ ಬದಲಾದ ಬಳಿಕ ಶಹಜಾದ್ ತಮ್ಮ ಹೆಸರನ್ನು ಸಂಜು ಎಂದು ಮರು ನಾಮಕರಣವನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಜೈ ಶ್ರೀರಾಮ್ ಎನ್ನುವ ಘೋಷಣೆಯನ್ನು ಕೂಗಿದ್ದಾರೆ.
ಈ ಕುರಿತು ಮಾತನಾಡಿದ ಶಹಝಾದ್, ನನಗೆ ಹಲವು ದಿನಗಳಿಂದ ಕನಸಿನಲ್ಲಿ ಶ್ರೀರಾಮ ಬಂದು ಹಿಂದೂ ಧರ್ಮಕ್ಕೆ ಮತಾಂತರವಾಗಲು ಹೇಳುತ್ತಿದ್ದ. ನಮ್ಮ ಪೂರ್ವಜರನ್ನು ಬಲವಂತವಾಗಿ ಇಸ್ಲಾಮ್ ಧರ್ಮಕ್ಕೆ ಮತಾಂತರ ಮಾಡಲಾಗಿತ್ತು. ನಾನೀಗ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದೇನೆ. ನನಗೆ ಯಾವುದೇ ವ್ಯಕ್ತಿಗಳಾಗಲೀ ಸಂಘಟನೆಗಳಾಗಲೀ ಮತಾಂತರವಾಗುವಂತೆ ಬಲವಂತ ಮಾಡಿಲ್ಲ. ನಮ್ಮ ಸ್ವ ಇಚ್ಛೆಯಿಂದಲೇ ಮತಾಂತರವಾಗುತ್ತಿದ್ದೇವೆ ಎಂದು ಹೇಳಿದ್ದಾರೆ.
ನನ್ನ ಆರಾಧ್ಯ ದೈವ ಭಗವಾನ್ ಶ್ರೀರಾಮಚಂದ್ರ. ನಾನು ನನ್ನ ಮುಂದಿನ ದಿನಗಳನ್ನು ಹಿಂದೂ ಸಂಪ್ರದಾಯದಂತೆ ಅನುಸರಿಸುತ್ತೇನೆ ಎಂದು ಹೇಳಿದರು.ಈ ಬಗ್ಗೆ ಶಾಮ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಸಂಜು ಅಲಿಯಾಸ್ ಶಹಜಾದ್, ನಾನು ನನ್ನ ಸ್ವ-ಇಚ್ಛೆಯಿಂದ ಹಿಂದೂ ಧರ್ಮವನ್ನು ಸ್ವೀಕರಿಸಿದ್ದೇನೆ. ನನಗೆ ಹಿಂದೂ ಧರ್ಮಕ್ಕೆ ಮರಳಲು ಹಾಗೂ ಹಿಂದೂಗಳಂತೆ ಪೂಜೆ-ಪುನಸ್ಕಾರ ಸಲ್ಲಿಸಲು ಅನುಮತಿ ನೀಡಬೇಕೆಂದು ಕೋರಿಕೊಂಡಿದ್ದಾರೆ.
ಜಾಹೀರಾತುಗಳು
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…