Featured

ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ ; ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್ -Vishwanews24

ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ ; ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್ -Vishwanews24

ನವದೆಹಲಿ,: ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ, ಭಾರತದಿಂದ ಪರಾರಿಯಾಗಿ ತನ್ನದೇ ಆದ ದೇಶ ಕೈಲಾಸವನ್ನು ಸ್ಥಾಪನೆ ಮಾಡಿದ್ದೇನೆ ಎಂದು ಹೇಳುತ್ತಿರುವ, ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್‌ ನೀಡಿದ್ದು ‘ಕೈಲಾಸ’ದಲ್ಲಿ 1 ಲಕ್ಷ ಜನರು ನೆಲೆಸಬೇಕೆಂದು ಬಯಸಿದ್ದಾರೆ.

“ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ” ಎಂದು ನಿತ್ಯಾನಂದ ಶುಕ್ರವಾರ ಅಂತರರಾಷ್ಟ್ರೀಯ ವಲಸಿಗರ ದಿನದಂದು ಘೋಷಿಸಿದರು.

“ಜಾಗತೀಕರಣದ ಕಾರಣದಿಂದಾಗಿ ವಲಸೆ, ಸಾರಿಗೆಯನ್ನು ಪ್ರೋತ್ಸಾಹಿಸಬೇಕು. ಆದರೆ ಮಾನವ ನಿರ್ಮಿತ ವಿಪತ್ತಿನ ಕಾರಣದಿಂದ ಈ ವಲಸೆ ಕಾರ್ಯದತ್ತ ಗಮನ ಹರಿಸಬೇಕು ಎಂದರು.

ಕೈಲಾಸದಲ್ಲಿ ರಿಸರ್ವ್ ಬ್ಯಾಂಕ್ ಅನ್ನು ಸ್ಥಾಪಿಸಿರುವ ನಿತ್ಯಾನಂದ, ಈಗ ತನ್ನ ದೇಶಕ್ಕೆ ಬರುವವರಿಗೆ ವೀಸಾ ನೀಡಲು ಪ್ರಾರಂಭಿಸಿದ್ದಾರೆ. ಇನ್ನು ಈ ಕೈಲಾಸ ಹಿಂದೂ ರಾಷ್ಟ್ರ ಆಸ್ಟ್ರೇಲಿಯಾದಲ್ಲಿ ಇದೆ ಎಂದು ಹೇಳಲಾದರೂ, ಅದು ಸರಿಯಾಗಿ ಯಾವ ಪ್ರದೇಶದಲ್ಲಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಈ ಹಿಂದೆ ಈಕ್ವೇಡಾರ್‌ ಎಂಬ ದ್ವೀಪವನ್ನು ತಾನು ಖರೀದಿ ಮಾಡಿ ಅಲ್ಲಿ ತನ್ನದೇ ದೇಶವನ್ನು ಸ್ಥಾಪಿಸಿದ್ದೇನೆ ಎಂದು ಹೇಳಿದ್ದ ನಿತ್ಯಾನಂದನ ಹೇಳಿಕೆಗೆ ತದ್ವಿರುದ್ಧವಾಗಿ ಅಲ್ಲಿನ ಸರ್ಕಾರವು ನಾವು ಯಾವುದೇ ದ್ವೀಪವನ್ನು ಮಾರಾಟ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿತ್ತು.

ಇನ್ನು ಈಗ ಕೈಲಾಸಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಹೇಳಿರುವ ನಿತ್ಯಾನಂದ ಸಂದರ್ಶಕರಿಗೆ ತನ್ನ ದೇಶ ‘ಕೈಲಾಸ’ದಲ್ಲಿ ಮೂರು ದಿನಗಳಿಗಿಂತ ಅಧಿಕ ಕಾಲ ಉಳಿಯಲು ಅವಕಾಶವಿಲ್ಲ ಎಂದು ಹೇಳಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

13 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

13 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

13 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

16 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

17 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

17 hours ago