Featured

ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ ; ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್ -Vishwanews24

ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ ; ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್ -Vishwanews24

ನವದೆಹಲಿ,: ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ, ಭಾರತದಿಂದ ಪರಾರಿಯಾಗಿ ತನ್ನದೇ ಆದ ದೇಶ ಕೈಲಾಸವನ್ನು ಸ್ಥಾಪನೆ ಮಾಡಿದ್ದೇನೆ ಎಂದು ಹೇಳುತ್ತಿರುವ, ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ದೇಶ ಕೈಲಾಸಕ್ಕೆ ವೀಸಾ ಆಫರ್‌ ನೀಡಿದ್ದು ‘ಕೈಲಾಸ’ದಲ್ಲಿ 1 ಲಕ್ಷ ಜನರು ನೆಲೆಸಬೇಕೆಂದು ಬಯಸಿದ್ದಾರೆ.

“ಕನಿಷ್ಠ 1,00,000 ಜನರು ಕೈಲಾಸದಲ್ಲಿ ನೆಲೆಸಬೇಕೆಂದು ನಾನು ಯೋಜಿಸುತ್ತಿದ್ದೇನೆ” ಎಂದು ನಿತ್ಯಾನಂದ ಶುಕ್ರವಾರ ಅಂತರರಾಷ್ಟ್ರೀಯ ವಲಸಿಗರ ದಿನದಂದು ಘೋಷಿಸಿದರು.

“ಜಾಗತೀಕರಣದ ಕಾರಣದಿಂದಾಗಿ ವಲಸೆ, ಸಾರಿಗೆಯನ್ನು ಪ್ರೋತ್ಸಾಹಿಸಬೇಕು. ಆದರೆ ಮಾನವ ನಿರ್ಮಿತ ವಿಪತ್ತಿನ ಕಾರಣದಿಂದ ಈ ವಲಸೆ ಕಾರ್ಯದತ್ತ ಗಮನ ಹರಿಸಬೇಕು ಎಂದರು.

ಕೈಲಾಸದಲ್ಲಿ ರಿಸರ್ವ್ ಬ್ಯಾಂಕ್ ಅನ್ನು ಸ್ಥಾಪಿಸಿರುವ ನಿತ್ಯಾನಂದ, ಈಗ ತನ್ನ ದೇಶಕ್ಕೆ ಬರುವವರಿಗೆ ವೀಸಾ ನೀಡಲು ಪ್ರಾರಂಭಿಸಿದ್ದಾರೆ. ಇನ್ನು ಈ ಕೈಲಾಸ ಹಿಂದೂ ರಾಷ್ಟ್ರ ಆಸ್ಟ್ರೇಲಿಯಾದಲ್ಲಿ ಇದೆ ಎಂದು ಹೇಳಲಾದರೂ, ಅದು ಸರಿಯಾಗಿ ಯಾವ ಪ್ರದೇಶದಲ್ಲಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಈ ಹಿಂದೆ ಈಕ್ವೇಡಾರ್‌ ಎಂಬ ದ್ವೀಪವನ್ನು ತಾನು ಖರೀದಿ ಮಾಡಿ ಅಲ್ಲಿ ತನ್ನದೇ ದೇಶವನ್ನು ಸ್ಥಾಪಿಸಿದ್ದೇನೆ ಎಂದು ಹೇಳಿದ್ದ ನಿತ್ಯಾನಂದನ ಹೇಳಿಕೆಗೆ ತದ್ವಿರುದ್ಧವಾಗಿ ಅಲ್ಲಿನ ಸರ್ಕಾರವು ನಾವು ಯಾವುದೇ ದ್ವೀಪವನ್ನು ಮಾರಾಟ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿತ್ತು.

ಇನ್ನು ಈಗ ಕೈಲಾಸಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಹೇಳಿರುವ ನಿತ್ಯಾನಂದ ಸಂದರ್ಶಕರಿಗೆ ತನ್ನ ದೇಶ ‘ಕೈಲಾಸ’ದಲ್ಲಿ ಮೂರು ದಿನಗಳಿಗಿಂತ ಅಧಿಕ ಕಾಲ ಉಳಿಯಲು ಅವಕಾಶವಿಲ್ಲ ಎಂದು ಹೇಳಿದ್ದರು.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago