ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್ವುಡ್ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ.
ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಹೊಸಕೆರೆಹಳ್ಳಿಯ ಖಾಸಗಿ ಆಸ್ಪತ್ರೆಯಿಂದ ಬನಶಂಕರಿಗೆ ಮೃತದೇಹ ಕೊಂಡೊಯ್ಯಲು ಸಿದ್ದತೆ ನಡೆಸಲಾಗುತ್ತಿದೆ. ಮನೆಯ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…