ಕನ್ನಡದ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ನಿಧನ-Vishwanews24
ಕನ್ನಡದ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ನಿಧನ-Vishwanews24
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ನ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್(84) ಇಂದು ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಗಿನ ಜಾವ 6:30ರ ಸುಮಾರಿಗೆ ತಮ್ಮ ಅರಕೆರೆಯ ನಿವಾಸದಲ್ಲಿ ನಿಧನರಾಗಿದ್ದು, ಇವರು ಪಾಪ ಪಾಂಡು ಧಾರಾವಾಹಿಯ ಪಾತ್ರದಿಂದ ಜನಮನ್ನಣೆಗಳಿಸಿದ್ದರು. ಕನ್ನಡದ ಹಲವಾರು ಜನಪ್ರಿಯ ನಟರೊಂದಿಗೆ ನಟಿಸಿ ಕನ್ನಡದ ಸಿನಿ ಪ್ರೇಕ್ಷಕರನ್ನು ತಮ್ಮ ಹಾಸ್ಯದ ಮೂಲಕ ರಂಜಿಸಿದ ಕಲಾವಿದ ಇಂದು ಇಹಲೋಕ ತ್ಯಜಿಸಿದ್ದಾರೆ. ಕಲಾವಿದನ ಆಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಬೆಂಗಳೂರು : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಭೇಟಿ ; ಪರಿಶೀಲನೆ -Vishwanews24
