ಬೆಂಗಳೂರು : ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ.
ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅನಂತ್ ನಾಗ್, ಹೆಸರಾಂತ ಶಹನಾಯಿ ವಾದಕ, ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ್ ಭಜಂತ್ರಿ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಈ ಸಾಲಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಈ ಗೌರವ ಪ್ರದಾನ ಸಮಾರಂಭವು ಇದೇ ಶುಕ್ರವಾರ ನಡೆಯಲಿದ್ದು, ಘಟಿಕೋತ್ಸವದ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ನೀಡಿ ಗೌರವಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…