ಬೆಂಗಳೂರು : ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು , ಬೆಳಗಾವಿ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ, ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ. ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ ‘ಕನ್ನಡಿಗರಿಗೆ ಸರ್ಕಾರ ಹೆದರಬಾರದು’ ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…