Featured

ಕನ್ನಡಿಗರ ಬಗ್ಗೆ ನಿಜವಾಗಲೂ ಕಾಳಜಿ ಇದ್ದರೆ, ಪ್ರಧಾನಿಗೆ ಪತ್ರ ಬರೆದು ಅನ್ನಭಾಗ್ಯಕ್ಕಾಗಿ ‌ಅಕ್ಕಿ ಕೊಡಿಸಿ : ಪ್ರಿಯಾಂಕ್ ಖರ್ಗೆ – Vishwanews24

ಕನ್ನಡಿಗರ ಬಗ್ಗೆ ನಿಜವಾಗಲೂ ಕಾಳಜಿ ಇದ್ದರೆ, ಪ್ರಧಾನಿಗೆ ಪತ್ರ ಬರೆದು ಅನ್ನಭಾಗ್ಯಕ್ಕಾಗಿ ‌ಅಕ್ಕಿ ಕೊಡಿಸಿ : ಪ್ರಿಯಾಂಕ್ ಖರ್ಗೆ

ಕಲಬುರಗಿ: ಕನ್ನಡಿಗರ ಬಗ್ಗೆ ನಿಜವಾಗಲೂ ಕಾಳಜಿ ಇದ್ದರೆ, ಪ್ರೀತಿಯಿದ್ದರೆ ಮೊದಲು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಅನ್ನಭಾಗ್ಯಕ್ಕಾಗಿ ‌ಅಕ್ಕಿ ಕೊಡಿಸಿ ಕನ್ನಡಿಗರ ಅಸ್ಮಿತೆ ಉಳಿಸಲಿ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ಕಾಳು ಕಡಿಮೆಯಾದರೂ ಅನ್ನಭಾಗ್ಯ ಅಕ್ಕಿ ತಗೋಬೇಡಿ ಎಂದು ಸರಕಾರದ ವಿರುದ್ಧ ಜನರಿಗೆ ಚೇತರಿಸುವ ಬದಲು, ಕನ್ನಡಿಗರ ಹಸಿವು ನೀಗಿಸಲು ಮುಂದಾಗಲಿ. ಅವರೂ ಮುಖ್ಯಮಂತ್ರಿ ಯಾಗಿದ್ದವರು. ಅವರ ಮಾತಿಗಾದರೂ ಬಿಜೆಪಿ ಹೈಕಮಾಂಡ್ ಕಿಮ್ಮತ್ತು ನೀಡಿ 3400 ರೂ. ಗಳಲ್ಲಾದರೂ ಕ್ವಿಂಟಾಲ್ ಅಕ್ಕಿ ಕೊಡಿಸಲಿ ನಾವು ಸನ್ಮಾನ‌ ಮಾಡುತ್ತೇವೆ ಎಂದರು.

ಫುಡ್ ಕಾರ್ಪೋರೇಷನ್ ಇಂಡಿಯಾ ಜೂನ್ 12ಕ್ಕೆ ನಮ್ಮ ಸರಕಾರದ ಪತ್ರಕ್ಕೆ ಉತ್ತರಿಸಿ 3400 ರೂ ಕ್ವಿಂಟಾಲ್ ನಂತೆ 2.28 ಮೆ.ಟನ್ ಅಕ್ಕಿ ಕೊಡುವುದಾಗಿ ಹೇಳಿ ಮರುದಿನವೇ , ಜೂನ್ 13 ರಂದು ಕರ್ನಾಟಕಕ್ಕೆ ಕೊಡಲಿಕ್ಕಾಗುವುದಿಲ್ಲ. ಇತರೆ ರಾಜ್ಯಗಳಿಗೆ ಹಿಂದಿನಂತೆ ನಿರಂತರವಾಗಿ‌ ಕೊಡಲಾಗುವುದು ಎಂದು ಪತ್ರ ಬರೆದಿದೆ. ಬಿಜೆಪಿಯವರು ಕನ್ನಡಿಗರ ಅನ್ನಭಾಗ್ಯಕ್ಕೆ ಅಡ್ಡಿ ಪಡಿಸುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.

ಬಿಜೆಪಿಯ ಈ ಸೇಡಿನ ರಾಜಕಾರಣ ಕನ್ನಡಿಗರ ಅಸ್ಮಿತೆಗೆ ಧಕ್ಕೆ ಉಂಟು ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಕನ್ನಡಿಗರು ನಮ್ಮ ಮಾತು ಕೇಳಲಿಲ್ಲ. ಮೋದಿ ಅವರ ಕೈ ಬಲ‌ಪಡಿಸಲಿಲ್ಲ. ಬಿಜೆಪಿಗೆ ವೋಟು ಮಾಡದಿದ್ದರೆ ಮೋದಿ ಆಶೀರ್ವಾದ ಸಿಗುವುದಿಲ್ಲವೆಂದು ಹೇಳಿದ್ದರು. ಈಗ ಆಶೀರ್ವಾದದ ಗೂಢಾರ್ಥ ಗೊತ್ತಾಗುತ್ತಿದೆ. ಪುಡ್ ಕಾರ್ಪೊರೇಷನ್ ಮುಖೇನ ನಮ್ಮ ಯೋಜನೆ ತಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಏನೇ ಆದರೂ ನಾವು ಮತ್ತು ನಮ್ಮ ಸಿಎಂ, ಡಿಸಿಎಂ ಸೇರಿ ಶತಾಯ ಗತಾಯ ಜುಲೈ 1ರಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದರು.

25 ಸಂಸದರು ಬಾಯಿ ಬಿಟ್ಟು ಕೇಳಿ: ರಾಜ್ಯದ 25 ಜನ ಸಂಸದರಿದ್ದಾರೆ. ಅವರೆಲ್ಲರೂ ಸಂಸತ್ತಿನಲ್ಲಿ ಮೋದಿ ಅವರಿಗೆ ಪ್ರಶ್ನಿಸಿ, ನಾವು (ಕರ್ನಾಟಕ) ಹಣ ಕೊಟ್ಟು ಅಕ್ಕಿ ಖರೀದಿಸಲು ಅವಕಾಶ ಕೊಡಲಿ. ಅಷ್ಟಾದರೂ ಮಾಡಿ ಕನ್ನಡಿಗರ ಋಣ ತೀರಿಸಲಿ ಎಂದರು.

ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಅಲ್ಲಂಪ್ರಭು ಪಾಟೀಲ, ಎಮ.ವೈ.ಪಾಟೀಲ, ಕನೀಜ್ ಫಾತಿಮಾ ಸೇರಿದಂತೆ ಇತರರು ಇದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

17 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

18 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

18 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

19 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

19 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago