Featured

ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ , ಕರ್ನಾಟಕದಲ್ಲಿ ಕನ್ನಡವೇ ಮೊದಲು : ಸರಕಾರದ ವಿರುದ್ಧ ಎಚ್‌.ಡಿ ಕುಮಾರಸ್ವಾಮಿ – Vishwanews24

ಕರ್ನಾಟಕದಲ್ಲಿ ಕನ್ನಡವೇ ಮೊದಲು..

ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ..

ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ..?

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ‘ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ’ ಎಂದಿದ್ದಾರೆ.

ಈ ಕುರಿತು ಸೋಮವಾರ ಸಾಮಾಜಿಕ ತಾಣಗಳಲ್ಲಿ ಪೊಸ್ಟ್‌ ಪ್ರಕಟಿಸಿರುವ ಅವರು, ‘ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸದಿರುವುದು ಅಕ್ಷಮ್ಯ’ ಎಂದಿದ್ದಾರೆ.

‘ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ. ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ,’ ಎಂದು ಹೇಳಿದ್ದಾರೆ

‘ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಸಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ,‘ ಎಂದು ಅವರು ಬರೆದುಕೊಂಡಿದ್ದಾರೆ.

‘ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ,‘ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ರಾಜಕಾರಣದಲ್ಲೂ ಕನ್ನಡಿಗರಿಗೆ ಪಂಗನಾಮ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು,’ ಎಂದು ಕುಮಾರಸ್ವಾಮಿ ಅವರು  ಹೇಳಿದ್ದಾರೆ.

ಬ್ರೇಕಿಂಗ್ : ಡ್ರಗ್ಸ್‌ ಪ್ರಕರಣ ; ಆರ್ಯನ್ ಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – VIshwanews24

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

14 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

17 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

17 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

18 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

18 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

18 hours ago