Featured

ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು – vishwanews24

ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಿನ್ನೆ ಸಂಜೆಯಷ್ಟೇ ನಿನಾಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ವಿನೋದ್ ದೊಂಡಾಲೆ ಬಂದಿದ್ದರು ಎನ್ನಲಾಗಿದೆ. ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ನಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅತಿಥಿ,ಬೇರು,ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು. ನಟ, ನಿರ್ದೇಶಕ, ನಿರ್ಮಾಪಕರಾಗಿಯೂ ಸಕ್ರಿಯರಾಗಿದ್ದರು.

ಇನ್ನೂ ಕೆಲವು ಸಿನಿಮಾಗಳ ಎರಡನೇ ಭಾಗದ ಚಿತ್ರೀಕರಣ ನಡೆಯುತ್ತಿದೆ. ಈಗ ಸತೀಶ್‌ ನೀನಾಸಂ ನಟನೆಯ ‘ಅಶೋಕ ಬ್ಲೇಡ್‌’ ಸಿನಿಮಾ ಸಹ ಎರಡು ಭಾಗಗಳಲ್ಲಿ ರಿಲೀಸ್‌ ಆಗಲಿದೆ.ಅವರ ವೃತ್ತಿ ಬದುಕಿನ ಬಹಳ ವಿಶೇಷ ಸಿನಿಮಾ ಎಂದೇ ಅನಿಸಿಕೊಂಡಿರುವ ಮತ್ತು ಬಿಗ್‌ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾವನ್ನು ವಿನೋದ್‌ ವಿ ದೊಂಡಾಲೆ ನಿರ್ದೇಶನ ಮಾಡುತ್ತಿದ್ದಾರೆ. 70ರ ದಶಕದಲ್ಲಿ ನಡೆಯಲಿರುವ ಇದರ ಕಥೆಯನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್‌ ಮಾಡಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

17 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

17 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

17 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

17 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

18 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

18 hours ago