Featured

ಕನ್ನಡ ಚಿತ್ರರಂಗ ಐಟಿ ದಾಳಿ, ತೆರಿಗೆ ಇಲಾಖೆ ಡಿಜಿ ಹೀಗೆ ಅಂದರು…?

ಬೆಂಗಳೂರು: ನಾವು ಎಲ್ಲಾ ಸಿನಿಮಾ ಮಂದಿಗೂ ಮನವಿ ಮಾಡುತ್ತೇವೆ. ಆದಷ್ಟೂ ಟ್ಯಾಕ್ಸ್ ಫೈಲ್ ಮಾಡಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸರ್ಚ್ ಅಪರೇಷನ್ ಮುಂದುವರೆಯುತ್ತೆ ಅಂತಾ ಆದಾಯ ತೆರಿಗೆ ಇಲಾಖೆ ಡಿಜಿ ಬಿ.ಆರ್ ಬಾಲಕೃಷ್ಣನ್ ಹೇಳಿದ್ದಾರೆ.

ಸಿನಿಮಾ ನಿರ್ಮಾಪಕರು ಮತ್ತು ನಟರ ಮೇಲಿನ ದಾಳಿ ವಿಚಾರವಾಗಿ ಐಟಿ ಇಲಾಖೆಯ ಅನ್ವೇಷಣಾ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ಚಿತ್ರವೂ ಶೇ.30% ರಿಂದ ಶೇ. 40% ರಷ್ಟು ನಗದಿನಲ್ಲಿ ವ್ಯವಹಾರವಾಗಿವೆ. ಫಿಲ್ಮ್ ಪ್ರೋಡಕ್ಷನ್ ಸಂಪೂರ್ಣ ನಗದಿನಲ್ಲಿ ನಡೆದಿದೆ. ಚಿತ್ರೀಕರಣ ಕೂಡಾ ನಗದು ವ್ಯವಹಾರದಲ್ಲೇ ನಡೆದಿದೆ. ಇನ್ನೂ ಥೀಯೆಟರ್​ನಲ್ಲಿ ಕಲೆಕ್ಟ್ ಆದ ಹಣವೂ ನಿರ್ಮಾಪಕರಿಗೆ ನಗದು ಮೂಲಕವೇ ಹೋಗಿದೆ. ಇನ್ನೂ ನಟರು ಕೂಡಾ ಸಂಭಾವನೆಯನ್ನು ನಗದು ರೂಪದಲ್ಲೇ ಪಡಯುತ್ತಾರೆ. ಅಲ್ಲದೇ ಓವರ್ ಸೇಸ್ ರೈಟ್ಸ್, ಟಿವಿ ರೈಟ್ಸ್, ಡಿಜಿಟಲ್ ರೈಟ್ಸ್ ಮತ್ತು ಆಡಿಯೋ ರೈಟ್ಸ್ ಯಾವುದಕ್ಕೂ ನಿರ್ಮಾಪಕರು ಲೆಕ್ಕ ತೋರಿಸಿಲ್ಲ ಅಂತಾ ಹೇಳಿದರು. ಇದೇ ವೇಳೆ, ಸಿನಿಮಾ ಸಿಬ್ಬಂದಿ ಯಾರೂ ಸಹ ಆದಾಯ ತೋರಿಸುತ್ತಿಲ್ಲ. ಟ್ಯಾಕ್ಸ್ ಕಟ್ಟುವ ಬಗ್ಗೆ ಗಮನ ನೀಡಿಲ್ಲ. ಆಡಿಯೋ ಸೆಕ್ಷನ್, ಸಣ್ಣ ಕಲಾವಿದರು, ಪ್ರೋಡಕ್ಷನ್ ಟೀಂನವರು ಕೂಡಾ ಆದಾಯ ತೋರಿಸಿಲ್ಲ. ಅದಕ್ಕಾಗಿ ಫಿಲ್ಮ್ ಇಂಡಸ್ಟ್ರಿಯವರನ್ನು ಕರೆಯಿಸಿ ತಿಳುವಳಿಕೆ ನೀಡಿದ್ದೇವೆ ಅಂತಾ ಬಿ.ಆರ್ ಬಾಲಕೃಷ್ಣನ್ ಹೇಳಿದರು.

ಸಚಿವ ಡಿಕೆ ಶಿವಕುಮಾರ್ ಮೇಲೆನ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಅವರು, ವೈಯಕ್ತಿಕವಾಗಿ ಯಾವುದೇ ಕೇಸ್​ನ ಮಾಹಿತಿ ನೀಡಲು ಸಾಧ್ಯವಿಲ್ಲ. ಆದರೆ ಆ ಪ್ರಕರಣದ ಎಲ್ಲಾ ಕೇಸ್​ಗಳು ಪ್ರಾಸಿಕ್ಯೂಷನ್ ನಡೆಯುತ್ತಿವೆ. ಮುಂಬರುವ ಲೋಕಸಭಾ ಎಲೆಕ್ಷನ್ ಸಮಯದಲ್ಲಿಯೂ ಐಟಿ ಗುಪ್ತಚರ ಇಲಾಖೆ ಕೆಲಸ ಮಾಡಲಿದೆ ಅಂತಾ ಡಿಜಿಐಟಿ ಬಾಲಕೃಷ್ಣ ಹೇಳಿದರು.

ಮೂರನೇ ಸ್ಥಾನದಲ್ಲಿ ಕರ್ನಾಟಕ ಮತ್ತು ಗೋವಾ ವಿಂಗ್​:
ಟ್ಯಾಕ್ಸ್ ಕಲೆಕ್ಟ್ ಮಾಡುವಲ್ಲಿ ದೇಶದಲ್ಲಿ ನಮ್ಮ ವಿಂಗ್ (ಕರ್ನಾಟಕ ಮತ್ತು ಗೋವಾ) ಮೂರನೇ ಸ್ಥಾನದಲ್ಲಿದೆ. ಮೊದಲ ಸ್ಥಾನ ಮುಂಬೈ ಹಾಗೂ ನವದೆಹಲಿ ಎರಡನೇ ಸ್ಥಾನದಲ್ಲಿದೆ. ಸಾಫ್ಟ್ ವೇರ್, ಆಟೋ ಮೊಬೈಲ್ಸ್ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚಾಗಿ ತೆರಿಗೆ ಸಂಗ್ರಹ ಮಾಡಲಾಗಿದೆ ಅಂತಾ ಬಿ.ಆರ್ ಬಾಲಕೃಷ್ಣನ್ ಹೇಳಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago