ಮಂಗಳೂರು: ಕನ್ನಡ ತುಳು ಚಲನಚಿತ್ರ ,ರಂಗಭೂಮಿ ನಟ,ಪ್ರಾಸ ಸಾಹಿತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯ ದಿಂದ ಆ.10 ರ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ ಚೆನ್ನಯ್ಯ, ತಮಾಶೆಗಾಗಿ, ಐದೊಂದ್ಲ ಐದು ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿ ಜೋಗುಳ, ಗುರುರಾಘವೇಂದ್ರ ವೈಭವ, ರಂಗೋಲಿ ಮುಂತಾದ ಧಾರವಾಹಿಗಳಲ್ಲಿ ಶೇಖರ ಭಂಡಾರಿ ಅವರು ಅಭಿನಯಿಸಿದ್ದರು.
ಭಂಡಾರಿ ಅವರ ಪತ್ನಿ ವಾರಿಜಾ ಶೇಖರ್, ಇಬ್ಬರು ಪುತ್ರಿಯರು ಕುಟುಂಬಸ್ಥರನ್ನು ಅಗಲಿದ್ದಾರೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…