ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ -Vishwanews24
ಬೆಂಗಳೂರು: ‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ’ ಎಂಬ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ‘ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ರಾಜ್ಯ ದಲ್ಲಿ ಕನ್ನಡವೇ ಅಧಿಕೃತ ಭಾಷೆ’ ಎಂದು ಬಿಜೆಪಿಯವರೇ ಆದ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿರುವುದು ವಿಭಿನ್ನ ಚರ್ಚೆ ಹುಟ್ಟು ಹಾಕಿದೆ.
‘ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎನ್ನುವ ಮೂಲಕ ಯಡಿಯೂರಪ್ಪ ಪರೋಕ್ಷ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ.#Kannada
— CM of Karnataka (@CMofKarnataka) September 16, 2019
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಹಿಂದಿ ದಿವಸ್’ ಆಚರಣೆಯ ಸಂದರ್ಭದಲ್ಲಿ ‘ಒಂದು ದೇಶ, ಒಂದು ಭಾಷೆ’ ಎಂದು ಪ್ರತಿಪಾದಿಸಿದ್ದರು.
