ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ನ01ರ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಸಚಿವರು,ಕನ್ನಡವನ್ನು ಬೆಳೆಸಬೇಕಾದರೆ ಅದನ್ನು ಬಳಸಬೇಕಾಗಿರುತ್ತದೆ. ಆಡಳಿತದಲ್ಲಿ ಕನ್ನಡ ಜಾರಿಗೊಳಿಸಲು ಈಗಾಗಲೇ ನಮ್ಮ ಸರಕಾರ ಪ್ರತಿಬದ್ದವಾಗಿದ್ದು, ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಸಲು ಕ್ರಮವಹಿಸಲಾಗುತ್ತಿದೆ.ಸುತ್ತೋಲೆಗಳು, ಆದೇಶಗಳು, ನೋಟಿಸ್ಗಳು, ಅಧಿಕೃತ ಜ್ಞಾಪನ, ಅಧಿಸೂಚನೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಹೊರಡಿಸಲಾಗುತ್ತಿದೆ. ಡಾ. ಸರೋಜಿನಿ ಮಹಿಷಿ ವರದಿ ಶಿಫಾರಸ್ಸುಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಸಮೀಕ್ಷಾ ವರದಿಯನ್ನು ವಿವಿಧ ಇಲಾಖೆಗಳು ಸರ್ಕಾರಕ್ಕೆ ಸಲ್ಲಿಸುತ್ತಿವೆ ಎಂದು ಹೇಳಿದರು.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ – Vishwanews24
ಕನ್ನಡದ ಸತ್ವ, ಸೊಗಸು, ಹಿರಿಮೆಗಳನ್ನು ಎತ್ತರಕ್ಕೇರಿಸಿದ ಬಿ.ಎಂ. ಶ್ರೀ, ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ, ರನ್ನಾಧಿಯಾಗಿ ಈಗಿನ ಎಲ್ಲಾ ಆಧುನಿಕ ಕವಿಗಳ ಕನ್ನಡ ನಾಡು, ನುಡಿ, ಸಂಸ್ಕೃತಿಯ ಮೇಲಿನ ಉತ್ಕತ ಅಭಿಮಾನ ನಮ್ಮ ಆದರ್ಶವಾಗಬೇಕು. ನಮ್ಮ ಭಾಷೆಯನ್ನು ಉಳಿಸಿ ಬೆಳೆಸುತ್ತಲೇ ಇತರ ಭಾಷೆಯನ್ನು ಉಳಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ. ಖಾದರ್, ಉಮನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…