ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ನ01ರ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಸಚಿವರು,ಕನ್ನಡವನ್ನು ಬೆಳೆಸಬೇಕಾದರೆ ಅದನ್ನು ಬಳಸಬೇಕಾಗಿರುತ್ತದೆ. ಆಡಳಿತದಲ್ಲಿ ಕನ್ನಡ ಜಾರಿಗೊಳಿಸಲು ಈಗಾಗಲೇ ನಮ್ಮ ಸರಕಾರ ಪ್ರತಿಬದ್ದವಾಗಿದ್ದು, ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಸಲು ಕ್ರಮವಹಿಸಲಾಗುತ್ತಿದೆ.ಸುತ್ತೋಲೆಗಳು, ಆದೇಶಗಳು, ನೋಟಿಸ್ಗಳು, ಅಧಿಕೃತ ಜ್ಞಾಪನ, ಅಧಿಸೂಚನೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಹೊರಡಿಸಲಾಗುತ್ತಿದೆ. ಡಾ. ಸರೋಜಿನಿ ಮಹಿಷಿ ವರದಿ ಶಿಫಾರಸ್ಸುಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಸಮೀಕ್ಷಾ ವರದಿಯನ್ನು ವಿವಿಧ ಇಲಾಖೆಗಳು ಸರ್ಕಾರಕ್ಕೆ ಸಲ್ಲಿಸುತ್ತಿವೆ ಎಂದು ಹೇಳಿದರು.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ – Vishwanews24
ಕನ್ನಡದ ಸತ್ವ, ಸೊಗಸು, ಹಿರಿಮೆಗಳನ್ನು ಎತ್ತರಕ್ಕೇರಿಸಿದ ಬಿ.ಎಂ. ಶ್ರೀ, ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ, ರನ್ನಾಧಿಯಾಗಿ ಈಗಿನ ಎಲ್ಲಾ ಆಧುನಿಕ ಕವಿಗಳ ಕನ್ನಡ ನಾಡು, ನುಡಿ, ಸಂಸ್ಕೃತಿಯ ಮೇಲಿನ ಉತ್ಕತ ಅಭಿಮಾನ ನಮ್ಮ ಆದರ್ಶವಾಗಬೇಕು. ನಮ್ಮ ಭಾಷೆಯನ್ನು ಉಳಿಸಿ ಬೆಳೆಸುತ್ತಲೇ ಇತರ ಭಾಷೆಯನ್ನು ಉಳಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ. ಖಾದರ್, ಉಮನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…