ಬೆಳಗಾವಿ: ಆಯಾಯ ರಾಜ್ಯಗಳಲ್ಲಿ ಅಲ್ಲಿಯ ಸ್ಥಳೀಯ ಭಾಷೆಯನ್ನು ಜನರು ಮಾತನಾಡುತ್ತಾರೆ. ನಮಗೆ ಇಂಗ್ಲಿಷ್ ಬರದಿದ್ದರೂ ತಪ್ಪು ತಪ್ಪಾಗಿ ಮಾತಾನಾಡುತ್ತೇವೆ. ಭಾಷೆ ಉಳಿದರೆ ಬದುಕು ಉಳಿಯುತ್ತದೆ. ಭಾಷೆ ಹೋದರೆ ಬದುಕು ಕೂಡ ಅಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯ ಕಲಾಭವನದಲ್ಲಿ ನಡೆದ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು , ನಾನು ಯಾವುದೇ ಭಾಷೆಯ ವಿರೋಧಿ ಅಲ್ಲ.ಈ ನೆಲದ ಭಾಷೆ ಕನ್ನಡವನ್ನು ಅನಾದರದಿಂದ ಕಾಣಬಾರದು. ಕೆಲವರಿಗೆ ಅಪ್ಪ, ಅಮ್ಮ ಅಂದರೆ ಖುಷಿ ಆಗುವುದಿಲ್ಲ. ಮಮ್ಮಿ, ಡ್ಯಾಡಿ ಅಂದರೆ ಖುಷಿಯಾಗುತ್ತದೆ. ಇದು ಅವಿದ್ಯಾವಂತರು ಮಾಡುವುದಿಲ್ಲ. ನಾನು ನನ್ನ ಮಕ್ಕಳಿಗೆ ಅಪ್ಪ, ಅಮ್ಮ ಎಂದು ಕರೆಯಲು ಹೇಳಿಕೊಟ್ಟಿದ್ದೇನೆ ಎಂದು ಹೇಳುವ ಮೂಲಕ ಭಾಷಾಭಿಮಾನ ಮೆರೆದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಮಾಧ್ಯಮ ಕುರಿತು ಬಿಗಿ ನಿಲುವು ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಹೊಸ ತಾಲ್ಲೂಕುಗಳಿಗೆ ಅಂತಿಮ ರಚನೆ ನೀಡುವಲ್ಲಿ ಕೂಡ ಭಿನ್ನ ನಿಲುವು ಹೊಂದಿದೆ ಎಂದು ಹೇಳಿದರು.
ಈ ವರ್ಷ ಕರ್ನಾಟಕ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಸಹ ಬೋಧನೆಯ ಮಾಧ್ಯಮವಾಗಿ ಜಾರಿಗೆ ತಂದಿರುವುದಕ್ಕೆ ಸಿದ್ದರಾಮಯ್ಯ ಭಿನ್ನ ನಿಲುವು ಹೊಂದಿದ್ದಾರೆ. ಸರ್ಕಾರಿ ಕನ್ನಡ ಭಾಷೆಯಲ್ಲಿಯೇ ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕೆಂದು ತಾವು ಅವಿರತ ಪ್ರಯತ್ನಿಸುತ್ತಿರುವುದಾಗಿ ಹೇಳಿದರು.
ಶಾಲೆಗಳಲ್ಲಿ ಬೋಧನೆಯ ಕಲಿಕಾ ಮಾಧ್ಯಮ ಆಯ್ಕೆ ಪೋಷಕರಿಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ನ ಆದೇಶ ಸ್ಥಳೀಯ ಭಾಷೆಗಳ ಬೆಳವಣಿಗೆಯ ಹಿತಾಸಕ್ತಿಗೆ ವಿರುದ್ಧವಾಗಿದೆ. ಸ್ಥಳೀಯ ಭಾಷೆಗಳ ಹಿತಾಸಕ್ತಿಗೆ ಅನುಗುಣವಾಗಿ ಪ್ರಧಾನ ಮಂತ್ರಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಪ್ರಧಾನಿ ಮೇಲೆ ಒತ್ತಡ ಹಾಕುವಂತೆ ಕೋರಿದ್ದೇನೆ ಎಂದರು. ಸ್ಥಳೀಯ ಭಾಷೆಗಳ ರಕ್ಷಣೆಗೆ ಅಗತ್ಯವಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ನಾನು ಕೋರಿಕೆ ಮಾಡಿದ್ದೆ. ಆದರೆ ಅದಕ್ಕೆ ಪ್ರಧಾನಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…