Featured

ಕನ್ನಡ ಭಾಷೆಯನ್ನು ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕು : ಸಿದ್ದರಾಮಯ್ಯ -Vishwanews24

ಬೆಳಗಾವಿ: ಆಯಾಯ ರಾಜ್ಯಗಳಲ್ಲಿ ಅಲ್ಲಿಯ ಸ್ಥಳೀಯ ಭಾಷೆಯನ್ನು ಜನರು ಮಾತನಾಡುತ್ತಾರೆ. ನಮಗೆ ಇಂಗ್ಲಿಷ್ ಬರದಿದ್ದರೂ ತಪ್ಪು ತಪ್ಪಾಗಿ ಮಾತಾನಾಡುತ್ತೇವೆ. ಭಾಷೆ ಉಳಿದರೆ ಬದುಕು ಉಳಿಯುತ್ತದೆ. ಭಾಷೆ ಹೋದರೆ ಬದುಕು ಕೂಡ ಅಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಕಲಾಭವನದಲ್ಲಿ ನಡೆದ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು , ನಾನು ಯಾವುದೇ ಭಾಷೆಯ ವಿರೋಧಿ ಅಲ್ಲ.ಈ ನೆಲದ ಭಾಷೆ ಕನ್ನಡವನ್ನು ಅನಾದರದಿಂದ ಕಾಣಬಾರದು. ಕೆಲವರಿಗೆ ಅಪ್ಪ, ಅಮ್ಮ ಅಂದರೆ ಖುಷಿ ಆಗುವುದಿಲ್ಲ. ಮಮ್ಮಿ, ಡ್ಯಾಡಿ ಅಂದರೆ ಖುಷಿಯಾಗುತ್ತದೆ. ಇದು ಅವಿದ್ಯಾವಂತರು ಮಾಡುವುದಿಲ್ಲ. ನಾನು ನನ್ನ ಮಕ್ಕಳಿಗೆ ಅಪ್ಪ, ಅಮ್ಮ ಎಂದು ಕರೆಯಲು ಹೇಳಿಕೊಟ್ಟಿದ್ದೇನೆ ಎಂದು ಹೇಳುವ ಮೂಲಕ ಭಾಷಾಭಿಮಾನ ಮೆರೆದರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಮಾಧ್ಯಮ ಕುರಿತು ಬಿಗಿ ನಿಲುವು ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಹೊಸ ತಾಲ್ಲೂಕುಗಳಿಗೆ ಅಂತಿಮ ರಚನೆ ನೀಡುವಲ್ಲಿ ಕೂಡ ಭಿನ್ನ ನಿಲುವು ಹೊಂದಿದೆ ಎಂದು ಹೇಳಿದರು.

ಈ ವರ್ಷ ಕರ್ನಾಟಕ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಸಹ ಬೋಧನೆಯ ಮಾಧ್ಯಮವಾಗಿ ಜಾರಿಗೆ ತಂದಿರುವುದಕ್ಕೆ ಸಿದ್ದರಾಮಯ್ಯ ಭಿನ್ನ ನಿಲುವು ಹೊಂದಿದ್ದಾರೆ. ಸರ್ಕಾರಿ ಕನ್ನಡ ಭಾಷೆಯಲ್ಲಿಯೇ ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕೆಂದು ತಾವು ಅವಿರತ ಪ್ರಯತ್ನಿಸುತ್ತಿರುವುದಾಗಿ ಹೇಳಿದರು.

ಶಾಲೆಗಳಲ್ಲಿ ಬೋಧನೆಯ ಕಲಿಕಾ ಮಾಧ್ಯಮ ಆಯ್ಕೆ ಪೋಷಕರಿಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ನ ಆದೇಶ ಸ್ಥಳೀಯ ಭಾಷೆಗಳ ಬೆಳವಣಿಗೆಯ ಹಿತಾಸಕ್ತಿಗೆ ವಿರುದ್ಧವಾಗಿದೆ. ಸ್ಥಳೀಯ ಭಾಷೆಗಳ ಹಿತಾಸಕ್ತಿಗೆ ಅನುಗುಣವಾಗಿ ಪ್ರಧಾನ ಮಂತ್ರಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಪ್ರಧಾನಿ ಮೇಲೆ ಒತ್ತಡ ಹಾಕುವಂತೆ ಕೋರಿದ್ದೇನೆ ಎಂದರು. ಸ್ಥಳೀಯ ಭಾಷೆಗಳ ರಕ್ಷಣೆಗೆ ಅಗತ್ಯವಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ನಾನು ಕೋರಿಕೆ ಮಾಡಿದ್ದೆ. ಆದರೆ ಅದಕ್ಕೆ ಪ್ರಧಾನಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago