Featured

ಕನ್ನಡ ಭಾಷೆಯನ್ನು ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕು : ಸಿದ್ದರಾಮಯ್ಯ -Vishwanews24

ಬೆಳಗಾವಿ: ಆಯಾಯ ರಾಜ್ಯಗಳಲ್ಲಿ ಅಲ್ಲಿಯ ಸ್ಥಳೀಯ ಭಾಷೆಯನ್ನು ಜನರು ಮಾತನಾಡುತ್ತಾರೆ. ನಮಗೆ ಇಂಗ್ಲಿಷ್ ಬರದಿದ್ದರೂ ತಪ್ಪು ತಪ್ಪಾಗಿ ಮಾತಾನಾಡುತ್ತೇವೆ. ಭಾಷೆ ಉಳಿದರೆ ಬದುಕು ಉಳಿಯುತ್ತದೆ. ಭಾಷೆ ಹೋದರೆ ಬದುಕು ಕೂಡ ಅಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಕಲಾಭವನದಲ್ಲಿ ನಡೆದ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು , ನಾನು ಯಾವುದೇ ಭಾಷೆಯ ವಿರೋಧಿ ಅಲ್ಲ.ಈ ನೆಲದ ಭಾಷೆ ಕನ್ನಡವನ್ನು ಅನಾದರದಿಂದ ಕಾಣಬಾರದು. ಕೆಲವರಿಗೆ ಅಪ್ಪ, ಅಮ್ಮ ಅಂದರೆ ಖುಷಿ ಆಗುವುದಿಲ್ಲ. ಮಮ್ಮಿ, ಡ್ಯಾಡಿ ಅಂದರೆ ಖುಷಿಯಾಗುತ್ತದೆ. ಇದು ಅವಿದ್ಯಾವಂತರು ಮಾಡುವುದಿಲ್ಲ. ನಾನು ನನ್ನ ಮಕ್ಕಳಿಗೆ ಅಪ್ಪ, ಅಮ್ಮ ಎಂದು ಕರೆಯಲು ಹೇಳಿಕೊಟ್ಟಿದ್ದೇನೆ ಎಂದು ಹೇಳುವ ಮೂಲಕ ಭಾಷಾಭಿಮಾನ ಮೆರೆದರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಮಾಧ್ಯಮ ಕುರಿತು ಬಿಗಿ ನಿಲುವು ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಹೊಸ ತಾಲ್ಲೂಕುಗಳಿಗೆ ಅಂತಿಮ ರಚನೆ ನೀಡುವಲ್ಲಿ ಕೂಡ ಭಿನ್ನ ನಿಲುವು ಹೊಂದಿದೆ ಎಂದು ಹೇಳಿದರು.

ಈ ವರ್ಷ ಕರ್ನಾಟಕ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಸಹ ಬೋಧನೆಯ ಮಾಧ್ಯಮವಾಗಿ ಜಾರಿಗೆ ತಂದಿರುವುದಕ್ಕೆ ಸಿದ್ದರಾಮಯ್ಯ ಭಿನ್ನ ನಿಲುವು ಹೊಂದಿದ್ದಾರೆ. ಸರ್ಕಾರಿ ಕನ್ನಡ ಭಾಷೆಯಲ್ಲಿಯೇ ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕೆಂದು ತಾವು ಅವಿರತ ಪ್ರಯತ್ನಿಸುತ್ತಿರುವುದಾಗಿ ಹೇಳಿದರು.

ಶಾಲೆಗಳಲ್ಲಿ ಬೋಧನೆಯ ಕಲಿಕಾ ಮಾಧ್ಯಮ ಆಯ್ಕೆ ಪೋಷಕರಿಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ನ ಆದೇಶ ಸ್ಥಳೀಯ ಭಾಷೆಗಳ ಬೆಳವಣಿಗೆಯ ಹಿತಾಸಕ್ತಿಗೆ ವಿರುದ್ಧವಾಗಿದೆ. ಸ್ಥಳೀಯ ಭಾಷೆಗಳ ಹಿತಾಸಕ್ತಿಗೆ ಅನುಗುಣವಾಗಿ ಪ್ರಧಾನ ಮಂತ್ರಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಪ್ರಧಾನಿ ಮೇಲೆ ಒತ್ತಡ ಹಾಕುವಂತೆ ಕೋರಿದ್ದೇನೆ ಎಂದರು. ಸ್ಥಳೀಯ ಭಾಷೆಗಳ ರಕ್ಷಣೆಗೆ ಅಗತ್ಯವಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ನಾನು ಕೋರಿಕೆ ಮಾಡಿದ್ದೆ. ಆದರೆ ಅದಕ್ಕೆ ಪ್ರಧಾನಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.

Vishwa News 24

Recent Posts

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

5 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

15 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

22 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

44 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago