Featured

ಕನ್ನಡ ಭಾಷೆಯನ್ನು ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕು : ಸಿದ್ದರಾಮಯ್ಯ -Vishwanews24

ಬೆಳಗಾವಿ: ಆಯಾಯ ರಾಜ್ಯಗಳಲ್ಲಿ ಅಲ್ಲಿಯ ಸ್ಥಳೀಯ ಭಾಷೆಯನ್ನು ಜನರು ಮಾತನಾಡುತ್ತಾರೆ. ನಮಗೆ ಇಂಗ್ಲಿಷ್ ಬರದಿದ್ದರೂ ತಪ್ಪು ತಪ್ಪಾಗಿ ಮಾತಾನಾಡುತ್ತೇವೆ. ಭಾಷೆ ಉಳಿದರೆ ಬದುಕು ಉಳಿಯುತ್ತದೆ. ಭಾಷೆ ಹೋದರೆ ಬದುಕು ಕೂಡ ಅಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಕಲಾಭವನದಲ್ಲಿ ನಡೆದ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು , ನಾನು ಯಾವುದೇ ಭಾಷೆಯ ವಿರೋಧಿ ಅಲ್ಲ.ಈ ನೆಲದ ಭಾಷೆ ಕನ್ನಡವನ್ನು ಅನಾದರದಿಂದ ಕಾಣಬಾರದು. ಕೆಲವರಿಗೆ ಅಪ್ಪ, ಅಮ್ಮ ಅಂದರೆ ಖುಷಿ ಆಗುವುದಿಲ್ಲ. ಮಮ್ಮಿ, ಡ್ಯಾಡಿ ಅಂದರೆ ಖುಷಿಯಾಗುತ್ತದೆ. ಇದು ಅವಿದ್ಯಾವಂತರು ಮಾಡುವುದಿಲ್ಲ. ನಾನು ನನ್ನ ಮಕ್ಕಳಿಗೆ ಅಪ್ಪ, ಅಮ್ಮ ಎಂದು ಕರೆಯಲು ಹೇಳಿಕೊಟ್ಟಿದ್ದೇನೆ ಎಂದು ಹೇಳುವ ಮೂಲಕ ಭಾಷಾಭಿಮಾನ ಮೆರೆದರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಮಾಧ್ಯಮ ಕುರಿತು ಬಿಗಿ ನಿಲುವು ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಹೊಸ ತಾಲ್ಲೂಕುಗಳಿಗೆ ಅಂತಿಮ ರಚನೆ ನೀಡುವಲ್ಲಿ ಕೂಡ ಭಿನ್ನ ನಿಲುವು ಹೊಂದಿದೆ ಎಂದು ಹೇಳಿದರು.

ಈ ವರ್ಷ ಕರ್ನಾಟಕ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಸಹ ಬೋಧನೆಯ ಮಾಧ್ಯಮವಾಗಿ ಜಾರಿಗೆ ತಂದಿರುವುದಕ್ಕೆ ಸಿದ್ದರಾಮಯ್ಯ ಭಿನ್ನ ನಿಲುವು ಹೊಂದಿದ್ದಾರೆ. ಸರ್ಕಾರಿ ಕನ್ನಡ ಭಾಷೆಯಲ್ಲಿಯೇ ಕಲಿಕೆಯ ಮಾಧ್ಯಮವನ್ನಾಗಿ ಮಾಡಬೇಕೆಂದು ತಾವು ಅವಿರತ ಪ್ರಯತ್ನಿಸುತ್ತಿರುವುದಾಗಿ ಹೇಳಿದರು.

ಶಾಲೆಗಳಲ್ಲಿ ಬೋಧನೆಯ ಕಲಿಕಾ ಮಾಧ್ಯಮ ಆಯ್ಕೆ ಪೋಷಕರಿಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ನ ಆದೇಶ ಸ್ಥಳೀಯ ಭಾಷೆಗಳ ಬೆಳವಣಿಗೆಯ ಹಿತಾಸಕ್ತಿಗೆ ವಿರುದ್ಧವಾಗಿದೆ. ಸ್ಥಳೀಯ ಭಾಷೆಗಳ ಹಿತಾಸಕ್ತಿಗೆ ಅನುಗುಣವಾಗಿ ಪ್ರಧಾನ ಮಂತ್ರಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಪ್ರಧಾನಿ ಮೇಲೆ ಒತ್ತಡ ಹಾಕುವಂತೆ ಕೋರಿದ್ದೇನೆ ಎಂದರು. ಸ್ಥಳೀಯ ಭಾಷೆಗಳ ರಕ್ಷಣೆಗೆ ಅಗತ್ಯವಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ನಾನು ಕೋರಿಕೆ ಮಾಡಿದ್ದೆ. ಆದರೆ ಅದಕ್ಕೆ ಪ್ರಧಾನಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

12 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago