ಕನ್ನಡ ಭಾಷೆ ಅತ್ಯಂತ ಸುಂದರವಾದ ಭಾಷೆ :ಪ್ರಧಾನಿ ಮೋದಿ – Vishwanews24

ನವದೆಹಲಿ: ಕನ್ನಡ ಬಹಳ ಸುಂದರವಾದ ಭಾಷೆ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಹಾಡಿ ಹೊಗಳಿದ್ದಾರೆ.
ಇತ್ತೀಚೆಗೆ ಲೋಕಸಭಾ ಚುನಾವಣಾ ಪ್ರಚಾರದ ನಿಮಿತ್ತ ಕರ್ನಾಟಕದ ಕಲ್ಬುರ್ಗಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭಿಸಿ ನೆರೆದಿದ್ದವರ ಮನ ಗೆದ್ದಿದ್ದರು. ‘ಕಲ್ಬುರ್ಗಿಯ ಎಲ್ಲ ಬಂಧು-ಭಗಿನಿಯರಿಗೆ ನಮಸ್ಕಾರ. ಕಲ್ಬುರ್ಗಿ ಜಿಲ್ಲೆ ತ್ಯಾಗ, ಸೇವಾಮನೋಭಾವಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಬಂದು ಮಾತನಾಡುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ’ ಎಂದು ಕನ್ನಡದಲ್ಲೇ ಹೇಳಿದ್ದರು. ಆ ವಿಡಿಯೋ ಈಗ ಟ್ವಿಟ್ಟರ್​ನಲ್ಲಿ ಹರಿದಾಡುತ್ತಿದೆ.

ಕನ್ನಡಿಗರೊಬ್ಬರು ಮಾಡಿದ ಟ್ವೀಟ್?ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಭಾಷೆ ಅತ್ಯಂತ ಸುಂದರವಾದ ಭಾಷೆ ಎಂದು ಬಣ್ಣಿಸಿದ್ದಾರೆ. ಟ್ವಿಟರ್’ನಲ್ಲಿ ಕರ್ನಾಟಕದ ಸಹನಾ ಹೊಳೀಮಠ ಎಂಬುವರ ಟ್ವೀಟ್?ಗೆ ಮೋದಿ ಪ್ರತಿಕ್ರಿಯಿಸಿದ್ದಾರೆ.

ಕಲಬುರಗಿಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಮೋದಿ ಅವರು ಪ್ರಾರಂಭದಲ್ಲಿ ಕನ್ನಡದಲ್ಲಿ ಮಾತನಾಡಿದ್ದರು. ಇದನ್ನು ಉಲ್ಲೇಖಿಸಿ ಸಹನಾ ಅವರು ಮೋದಿಜೀ ಕನ್ನಡದಲ್ಲಿ ಮಾತನಾಡಿದಾಗ ಖುಷಿ ಆಗುತ್ತದೆ ಅಲ್ವ ಎಂದಿದ್ದರು. ಅಲ್ಲದೆ, ಅವರು ಕನ್ನಡದಲ್ಲಿ ಮಾತನಾಡುವುದೇ ಒಂದು ಸುಂದರ ಕ್ಷಣ ಎಂದು ಟ್ವೀಟ್ ಮಾಡಿದ್ದರು

ಈ ವಿಡಿಯೋವನ್ನು ಕರ್ನಾಟಕದ ಸಹನಾ ಹೊಳಿಮಠ್ ಎಂಬುವವರು ಹೊಗಳಿ, ಪ್ರಧಾನಿ ಧ್ವನಿಯಲ್ಲಿ ಕನ್ನಡ ಕೇಳುವುದಕ್ಕೆ ಖುಷಿಯಾಗುತ್ತದೆ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಿ ಟ್ವೀಟ್ ಮಾಡಿದ್ದಲ್ಲದೇ ಕನ್ನಡ ಬಹಳ ಸುಂದರವಾದ ಭಾಷೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ತಮ್ಮ ಟ್ವೀಟ್ ಗೆ ಸ್ವತಃ ಪ್ರಧಾನಿಗಳಿಂದಲೇ ಪ್ರತಿಕ್ರಿಯೆ ಬಂದಿರುವುದಕ್ಕೆ ಸಹನಾ ಹೊಳಿಮಠ್ ಅವರೂ ಕೂಡ ತುಂಬಾ ಖುಷಿ ಪಟ್ಟಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಅಂತೆಯೇ ಪ್ರಧಾನಿ ಮೋದಿ ಅವರ ಕನ್ನಡ ಪ್ರೀತಿಗೆ ಹಲವು ಕನ್ನಡ ಟ್ವೀಟಿಗರೂ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago