ಕನ್ನಡ ಭಾಷೆ ಅತ್ಯಂತ ಸುಂದರವಾದ ಭಾಷೆ :ಪ್ರಧಾನಿ ಮೋದಿ – Vishwanews24

ನವದೆಹಲಿ: ಕನ್ನಡ ಬಹಳ ಸುಂದರವಾದ ಭಾಷೆ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಹಾಡಿ ಹೊಗಳಿದ್ದಾರೆ.
ಇತ್ತೀಚೆಗೆ ಲೋಕಸಭಾ ಚುನಾವಣಾ ಪ್ರಚಾರದ ನಿಮಿತ್ತ ಕರ್ನಾಟಕದ ಕಲ್ಬುರ್ಗಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭಿಸಿ ನೆರೆದಿದ್ದವರ ಮನ ಗೆದ್ದಿದ್ದರು. ‘ಕಲ್ಬುರ್ಗಿಯ ಎಲ್ಲ ಬಂಧು-ಭಗಿನಿಯರಿಗೆ ನಮಸ್ಕಾರ. ಕಲ್ಬುರ್ಗಿ ಜಿಲ್ಲೆ ತ್ಯಾಗ, ಸೇವಾಮನೋಭಾವಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಬಂದು ಮಾತನಾಡುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ’ ಎಂದು ಕನ್ನಡದಲ್ಲೇ ಹೇಳಿದ್ದರು. ಆ ವಿಡಿಯೋ ಈಗ ಟ್ವಿಟ್ಟರ್​ನಲ್ಲಿ ಹರಿದಾಡುತ್ತಿದೆ.

ಕನ್ನಡಿಗರೊಬ್ಬರು ಮಾಡಿದ ಟ್ವೀಟ್?ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಭಾಷೆ ಅತ್ಯಂತ ಸುಂದರವಾದ ಭಾಷೆ ಎಂದು ಬಣ್ಣಿಸಿದ್ದಾರೆ. ಟ್ವಿಟರ್’ನಲ್ಲಿ ಕರ್ನಾಟಕದ ಸಹನಾ ಹೊಳೀಮಠ ಎಂಬುವರ ಟ್ವೀಟ್?ಗೆ ಮೋದಿ ಪ್ರತಿಕ್ರಿಯಿಸಿದ್ದಾರೆ.

ಕಲಬುರಗಿಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಮೋದಿ ಅವರು ಪ್ರಾರಂಭದಲ್ಲಿ ಕನ್ನಡದಲ್ಲಿ ಮಾತನಾಡಿದ್ದರು. ಇದನ್ನು ಉಲ್ಲೇಖಿಸಿ ಸಹನಾ ಅವರು ಮೋದಿಜೀ ಕನ್ನಡದಲ್ಲಿ ಮಾತನಾಡಿದಾಗ ಖುಷಿ ಆಗುತ್ತದೆ ಅಲ್ವ ಎಂದಿದ್ದರು. ಅಲ್ಲದೆ, ಅವರು ಕನ್ನಡದಲ್ಲಿ ಮಾತನಾಡುವುದೇ ಒಂದು ಸುಂದರ ಕ್ಷಣ ಎಂದು ಟ್ವೀಟ್ ಮಾಡಿದ್ದರು

ಈ ವಿಡಿಯೋವನ್ನು ಕರ್ನಾಟಕದ ಸಹನಾ ಹೊಳಿಮಠ್ ಎಂಬುವವರು ಹೊಗಳಿ, ಪ್ರಧಾನಿ ಧ್ವನಿಯಲ್ಲಿ ಕನ್ನಡ ಕೇಳುವುದಕ್ಕೆ ಖುಷಿಯಾಗುತ್ತದೆ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಿ ಟ್ವೀಟ್ ಮಾಡಿದ್ದಲ್ಲದೇ ಕನ್ನಡ ಬಹಳ ಸುಂದರವಾದ ಭಾಷೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ತಮ್ಮ ಟ್ವೀಟ್ ಗೆ ಸ್ವತಃ ಪ್ರಧಾನಿಗಳಿಂದಲೇ ಪ್ರತಿಕ್ರಿಯೆ ಬಂದಿರುವುದಕ್ಕೆ ಸಹನಾ ಹೊಳಿಮಠ್ ಅವರೂ ಕೂಡ ತುಂಬಾ ಖುಷಿ ಪಟ್ಟಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಅಂತೆಯೇ ಪ್ರಧಾನಿ ಮೋದಿ ಅವರ ಕನ್ನಡ ಪ್ರೀತಿಗೆ ಹಲವು ಕನ್ನಡ ಟ್ವೀಟಿಗರೂ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago