Featured

ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ – vishwanews24

ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ

ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಧರಣಿ

ಉಡುಪಿ: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ)ಯ ಜಿಲ್ಲಾಧ್ಯಕ್ಷ ಅ.ರಾ. ಪ್ರಭಾಕರ್ ಪೂಜಾರಿ ಆಗ್ರಹಿಸಿದರು.

ರಾಜ್ಯ ಸರ್ಕಾರವು ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕರವೇ ವತಿಯಿಂದ ಮಂಗಳವಾರ (ಏ.7) ಹಮ್ಮಿಕೊಂಡಿದ್ದ ಧರಣಿಯಲ್ಲಿ ಮಾತನಾಡಿದರು.

ರಾಜ್ಯಪಾಲರು ಬರೆದಿರುವ ಪತ್ರದ ಹಿಂದೆ ಕರ್ನಾಟಕದಲ್ಲಿ ಶಾಶ್ವತವಾಗಿ ಹಿಂದಿ ಭಾಷೆ ಹೇರಿಕೆ ಮಾಡುವ ಹುನ್ನಾರವಿದೆ. ‘ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ’ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರು ತಮ್ಮ ಕಾರ್ಯವ್ಯಾಪ್ತಿಯನ್ನೂ ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹಿಂದಿ ಮಾಫಿಯಾದವರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತಿದೆ. ಹೀಗಾಗಿ ಅವರು ಕರ್ನಾಟಕದಲ್ಲಿ ರಾಜ್ಯಪಾಲರಾಗಿ ಉಳಿಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಅ. ರಾ. ಪ್ರಭಾಕರ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ವಿರೋಧಿ ನಿಲುವು ತಾಳಿರುವ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ವಜಾ ಮಾಡುವಂತೆ ಆಗ್ರಹಿಸಿ ಎಡಿಸಿ ಅಬೀದ್ ಗದ್ಯಾಳ್ ಅವರಿಗೆ ಅ.ರಾ. ಪ್ರಭಾಕರ್ ಪೂಜಾರಿ ಮನವಿ ಸಲ್ಲಿಸಿದರು.

ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರವೇ ಕರ್ನಾಟಕದ ಶಿಕ್ಷಣ ನೀತಿ ಕುರಿತು ತೀಮಾರ್ನಿಸುತ್ತದೆ. ಅದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಕೂಡಲೇ ಅವರನ್ನು ರಾಜ್ಯಪಾಲರ ಸ್ಥಾನದಿಂದ ವಜಾ ಮಾಡಬೇಕೆಂಬ ಮನವಿಯನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ನೀಡಲಾಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬಸ್ರುರ್, ಉಪಾಧ್ಯಕ್ಷ ಶಹಾಬುದ್ದೀನ್, ನಗರ ಅಧ್ಯಕ್ಷ ಅಜರುದ್ಧೀನ್, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ಪುರುಷೋತ್ತಮ ಪೂಜಾರಿ, ಉಡುಪಿ ಜಿಲ್ಲಾ ಮಹಿಳಾ ಘಟಕದ ಪ್ರಮುಖರಾದ ಅಶ್ವಿನಿ ನಾಯಕ್, ಅನೂಷಾ ಆಚಾರ್, ಗೀತಾ ಪೂಜಾರಿ, ಸುನಂದಾ ಕೋಟ್ಯಾನ್, ಜಿಲ್ಲಾ ಸಂಚಾಲಕ ಕೃಷ್ಣ ಪಾಂಗಾಳ, ಗೋಪಾಲ್ ದೊರೆ, ಅಯ್ಯಪ್ಪ, ಮಹೇಶ್ ಬಿ. ಎಚ್, ರಾಗು ಪೂಜಾರಿ, ಸುಕುಮಾರ್ ಶೆಟ್ಟಿ, ಅಕ್ಷತ್, ಕಾರ್ಕಳ ತಾಲೂಕು ಉಪಾಧ್ಯಕ್ಷ ಮುಬಿನ್ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago