ಕನ್ನಡ ಸಿನಿಮಾ ಮತ್ತು ಕಿರುತೆರೆ ಜಗತ್ತಿನ ಹೆಸರಾಂತ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಬುಧವಾರ ನಿಧನ ಹೊಂದಿದ್ದಾರೆ. ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಂಗೀತ ಕುಟುಂಬದಿಂದಲೇ ಬೆಳೆದು ಬಂದಿದ್ದ ಮನೋರಂಜನ್ ತಂದೆ ಪಂಡಿತ್ ಬಿ.ಎನ್.ಪಾರ್ಥಸಾರಥಿ ನಾಯ್ಡು ಕೂಡ ಸಂಗೀತದಲ್ಲಿ ಪಾಂಡಿತ್ಯ ಹೊಂದಿದ್ದರು. ಮಗನೂ ಇದೇ ಕ್ಷೇತ್ರದಲ್ಲೇ ಮುಂದುವರೆಯಬೇಕು ಎಂದು ಅಪೇಕ್ಷೆ ಪಟ್ಟಿದ್ದರು. ಅದರಂತೆ ಮನೋರಂಜನ್ 70ರ ದಶಕದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಎಂಟು ನೂರಕ್ಕೂ ಹೆಚ್ಚು ಸಂಗೀತದ ಆಲ್ಬಂ ಹೊರ ತಂದಿರುವ ಇವರು, ಮನೋರಂಜನ್ ಹೆಸರಿನ ತಂಡವನ್ನು ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ.
ಕಾರ್ತಿಕ ದೀಪ ಸೇರಿದಂತೆ ಅನೇಕ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆಗೆ ಸಂಗೀತ ಅಳವಡಿಸಿದ ಹೆಗ್ಗಳಿಕೆ ಇವರದ್ದು. ಕೆಲಕಾಲ ಇವರು ಆದರ್ಶ ಫಿಲ್ಮ್ ಇನ್ ಸ್ಟಿಟ್ಯೂಟ್ ನಲ್ಲಿ ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಂಗೀತಾಸಕ್ತರಿಗಾಗಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್ ಅಕಾಡೆಮಿ ಪ್ರಾರಂಭಿಸಿ ಸಂಗೀತ ಕ್ಷೇತ್ರಕ್ಕೆ ಹೊಸ ಹೊಸ ಪ್ರತಿಭೆಗಳನ್ನು ನೀಡಿದ್ದಾರೆ. ಅಗಲಿದೆ ಹಿರಿಯ ಸಂಗೀತ ಜೀವಕ್ಕೆ ಕನ್ನಡ ಕಿರುತೆರೆ ಕಲಾವಿದರು ಮತ್ತು ಸಂಗೀತ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…