Featured

ಕನ್ನಡ ಸಿನಿಮಾ ಮತ್ತು ಕಿರುತೆರೆ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ – Vishwanews24

ಕನ್ನಡ ಸಿನಿಮಾ ಮತ್ತು ಕಿರುತೆರೆ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ

ಕನ್ನಡ ಸಿನಿಮಾ ಮತ್ತು ಕಿರುತೆರೆ ಜಗತ್ತಿನ ಹೆಸರಾಂತ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಬುಧವಾರ ನಿಧನ ಹೊಂದಿದ್ದಾರೆ. ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಂಗೀತ ಕುಟುಂಬದಿಂದಲೇ ಬೆಳೆದು ಬಂದಿದ್ದ ಮನೋರಂಜನ್ ತಂದೆ ಪಂಡಿತ್ ಬಿ.ಎನ್.ಪಾರ್ಥಸಾರಥಿ ನಾಯ್ಡು ಕೂಡ ಸಂಗೀತದಲ್ಲಿ ಪಾಂಡಿತ್ಯ ಹೊಂದಿದ್ದರು. ಮಗನೂ ಇದೇ ಕ್ಷೇತ್ರದಲ್ಲೇ ಮುಂದುವರೆಯಬೇಕು ಎಂದು ಅಪೇಕ್ಷೆ ಪಟ್ಟಿದ್ದರು. ಅದರಂತೆ ಮನೋರಂಜನ್ 70ರ ದಶಕದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಎಂಟು ನೂರಕ್ಕೂ ಹೆಚ್ಚು ಸಂಗೀತದ ಆಲ್ಬಂ ಹೊರ ತಂದಿರುವ ಇವರು, ಮನೋರಂಜನ್ ಹೆಸರಿನ ತಂಡವನ್ನು ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಕಾರ್ತಿಕ ದೀಪ ಸೇರಿದಂತೆ ಅನೇಕ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆಗೆ ಸಂಗೀತ ಅಳವಡಿಸಿದ ಹೆಗ್ಗಳಿಕೆ ಇವರದ್ದು. ಕೆಲಕಾಲ ಇವರು ಆದರ್ಶ ಫಿಲ್ಮ್ ಇನ್ ಸ್ಟಿಟ್ಯೂಟ್ ನಲ್ಲಿ ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಂಗೀತಾಸಕ್ತರಿಗಾಗಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್ ಅಕಾಡೆಮಿ ಪ್ರಾರಂಭಿಸಿ ಸಂಗೀತ ಕ್ಷೇತ್ರಕ್ಕೆ ಹೊಸ ಹೊಸ ಪ್ರತಿಭೆಗಳನ್ನು ನೀಡಿದ್ದಾರೆ. ಅಗಲಿದೆ ಹಿರಿಯ ಸಂಗೀತ ಜೀವಕ್ಕೆ ಕನ್ನಡ ಕಿರುತೆರೆ ಕಲಾವಿದರು ಮತ್ತು ಸಂಗೀತ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago