ಕನ್ನಡ ಸಿನಿಮಾ ಮತ್ತು ಕಿರುತೆರೆ ಜಗತ್ತಿನ ಹೆಸರಾಂತ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಬುಧವಾರ ನಿಧನ ಹೊಂದಿದ್ದಾರೆ. ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಂಗೀತ ಕುಟುಂಬದಿಂದಲೇ ಬೆಳೆದು ಬಂದಿದ್ದ ಮನೋರಂಜನ್ ತಂದೆ ಪಂಡಿತ್ ಬಿ.ಎನ್.ಪಾರ್ಥಸಾರಥಿ ನಾಯ್ಡು ಕೂಡ ಸಂಗೀತದಲ್ಲಿ ಪಾಂಡಿತ್ಯ ಹೊಂದಿದ್ದರು. ಮಗನೂ ಇದೇ ಕ್ಷೇತ್ರದಲ್ಲೇ ಮುಂದುವರೆಯಬೇಕು ಎಂದು ಅಪೇಕ್ಷೆ ಪಟ್ಟಿದ್ದರು. ಅದರಂತೆ ಮನೋರಂಜನ್ 70ರ ದಶಕದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಎಂಟು ನೂರಕ್ಕೂ ಹೆಚ್ಚು ಸಂಗೀತದ ಆಲ್ಬಂ ಹೊರ ತಂದಿರುವ ಇವರು, ಮನೋರಂಜನ್ ಹೆಸರಿನ ತಂಡವನ್ನು ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ.
ಕಾರ್ತಿಕ ದೀಪ ಸೇರಿದಂತೆ ಅನೇಕ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆಗೆ ಸಂಗೀತ ಅಳವಡಿಸಿದ ಹೆಗ್ಗಳಿಕೆ ಇವರದ್ದು. ಕೆಲಕಾಲ ಇವರು ಆದರ್ಶ ಫಿಲ್ಮ್ ಇನ್ ಸ್ಟಿಟ್ಯೂಟ್ ನಲ್ಲಿ ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಂಗೀತಾಸಕ್ತರಿಗಾಗಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್ ಅಕಾಡೆಮಿ ಪ್ರಾರಂಭಿಸಿ ಸಂಗೀತ ಕ್ಷೇತ್ರಕ್ಕೆ ಹೊಸ ಹೊಸ ಪ್ರತಿಭೆಗಳನ್ನು ನೀಡಿದ್ದಾರೆ. ಅಗಲಿದೆ ಹಿರಿಯ ಸಂಗೀತ ಜೀವಕ್ಕೆ ಕನ್ನಡ ಕಿರುತೆರೆ ಕಲಾವಿದರು ಮತ್ತು ಸಂಗೀತ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…