ಕಾಪು: ಕೇರಳ ಮೂಲದ ಬಡ ಕುಟುಂಬ ಹಿನ್ನಲೆಯುಳ್ಳ ದ್ವಿತೀಯ ಬಿ.ಇ ವಿದ್ಯಾರ್ಥಿ ಸಂಜಯ್ ಶ್ರೀ ಕುಮಾರ್ ಕನ್ಯಾಕುಮಾರಿಯಿಂದ ಲಡಾಕ್ ವರೆಗೆ ರೈತರಿಗೆ ಬೆಂಬಲ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಧೇಯೊದ್ದೇಶದಿಂದ ಆರಂಭಿಸಿದ ಸೈಕಲ್ ಯಾತ್ರೆ ಶನಿವಾರ ಕಾಪು ತಲುಪಿದೆ.
ಆತನ ತಂದೆ ಶ್ರೀಕುಮಾರ್ ಅವರ ಸಾಮಾನ್ಯ ಪೆಡಲಿಂಗ್ ಸೈಕಲ್ ಮೂಲಕ ದೇಶದ ಕನ್ಯಾಕುಮಾರಿ ಮೂಲೆಯಿಂದ ಲಡಾಕ್ ಭಾಗಕ್ಕೆ ಸೈಕಲ್ ಯಾತ್ರೆ ಮಾಡುತ್ತಿರುವ ಸಂಜಯ್ ಅವರು ಈಗಾಗಲೇ 850 ಕಿಲೋಮೀಟರ್ ಕ್ರಮಿಸಿ ಆದಿತ್ಯವಾರದ ಸಂಜೆಯ ಸುಮಾರಿನಲ್ಲಿ ಮೂಳೂರು ಭಾಗದಲ್ಲಿ ಸ್ಥಳೀಯರು ಮಾಹಿತಿ ತಿಳಿದು ಸಂಜಯ್ ಅವರನ್ನು ಸ್ವಾಗತಿಸಿದರು.
ಡಿಸೆಂಬರ್ ನಲ್ಲಿ ಆರಂಭವಾದ ಈ ಯಾತ್ರೆ ಫೆಬ್ರವರಿಯ ಸುಮಾರಿಗೆ ಲಡಾಕ್ ಮುಟ್ಟುವ ಗುರಿಯನ್ನು ಇಟ್ಟುಕೊಂಡಿದ್ದು ಸುಮಾರು 3805 ಕಿಲೋಮೀಟರ್ ಉದ್ದದ ಈ ಪಯಣ ಇರಲಿದೆ.
ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ನ ಉಚ್ಚಿಲ ಶಾಖೆ ಉದ್ಘಾಟನೆ.-vishwanews24
ಸೈಕಲ್ ಪಯಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಬಡತನ ರೇಖೆಗಿಂತ ಕೆಲಗೆ ಇರುವ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದ ನನಗೆ ಸಾಧನೆ ಮಾಡುವ ಛಲ ಹಾಗೂ ಈ ದೇಶದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲಿಸುವ ಸಲುವಾಗಿ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಎಂಬ ಉದ್ದೇಶದಿಂದ ಕನ್ಯಾಕುಮಾರಿಯಿಂದ ಲಡಾಕ್ ಗೆ ಸೈಕಲ್ ಪಯಣ ಮಾಡುತ್ತಿದ್ದು ಇದಕ್ಕೆ ಮನೆಯವರ ಸಂಪೂರ್ಣ ಸಹಕಾರ ಬೆಂಬಲ ಇದ್ದು ಫೆಬ್ರವರಿ ಸುಮಾರಿಗೆ ಲಡಾಕ್ ಮುಟ್ಟುವ ಗುರಿ ಇಟ್ಟುಕೊಂಡಿದ್ದೇನೆ ಎಂದರು”
ಸಂಜಯ್ ಅವರ ಸೈಕಲ್ ಪಯಣ ಸ್ವಾಗತಿಸುವಲ್ಲಿ ಆಸ್ಟೋನ್ ಬಂಗೇರ,ಇಬ್ರಾಹಿಂ,ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…