Featured

ಕನ್ಯಾಕುಮಾರಿಯಿಂದ ಲಡಾಕ್ ಗೆ ಸೈಕಲ್ ಪಯಣದಲ್ಲಿ ಸಂಜಯ್ ಶ್ರೀಕುಮಾರ್- ರೈತರಿಗೆ ಬೆಂಬಲ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಧೇಯೊದ್ದೇಶ.- vishwanews24

ಕನ್ಯಾಕುಮಾರಿಯಿಂದ ಲಡಾಕ್ ಗೆ ಸೈಕಲ್ ಪಯಣದಲ್ಲಿ ಸಂಜಯ್ ಶ್ರೀಕುಮಾರ್- ರೈತರಿಗೆ ಬೆಂಬಲ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಧೇಯೊದ್ದೇಶ .

ಕಾಪು: ಕೇರಳ ಮೂಲದ ಬಡ ಕುಟುಂಬ ಹಿನ್ನಲೆಯುಳ್ಳ ದ್ವಿತೀಯ ಬಿ.ಇ ವಿದ್ಯಾರ್ಥಿ ಸಂಜಯ್ ಶ್ರೀ ಕುಮಾರ್ ಕನ್ಯಾಕುಮಾರಿಯಿಂದ ಲಡಾಕ್ ವರೆಗೆ ರೈತರಿಗೆ ಬೆಂಬಲ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಧೇಯೊದ್ದೇಶದಿಂದ ಆರಂಭಿಸಿದ ಸೈಕಲ್ ಯಾತ್ರೆ ಶನಿವಾರ ಕಾಪು ತಲುಪಿದೆ.

ಆತನ ತಂದೆ ಶ್ರೀಕುಮಾರ್ ಅವರ ಸಾಮಾನ್ಯ ಪೆಡಲಿಂಗ್ ಸೈಕಲ್ ಮೂಲಕ ದೇಶದ ಕನ್ಯಾಕುಮಾರಿ ಮೂಲೆಯಿಂದ ಲಡಾಕ್ ಭಾಗಕ್ಕೆ ಸೈಕಲ್ ಯಾತ್ರೆ ಮಾಡುತ್ತಿರುವ ಸಂಜಯ್ ಅವರು ಈಗಾಗಲೇ 850 ಕಿಲೋಮೀಟರ್ ಕ್ರಮಿಸಿ ಆದಿತ್ಯವಾರದ ಸಂಜೆಯ ಸುಮಾರಿನಲ್ಲಿ ಮೂಳೂರು ಭಾಗದಲ್ಲಿ ಸ್ಥಳೀಯರು ಮಾಹಿತಿ ತಿಳಿದು ಸಂಜಯ್ ಅವರನ್ನು ಸ್ವಾಗತಿಸಿದರು.

ಡಿಸೆಂಬರ್ ನಲ್ಲಿ ಆರಂಭವಾದ ಈ ಯಾತ್ರೆ ಫೆಬ್ರವರಿಯ  ಸುಮಾರಿಗೆ ಲಡಾಕ್ ಮುಟ್ಟುವ ಗುರಿಯನ್ನು ಇಟ್ಟುಕೊಂಡಿದ್ದು ಸುಮಾರು 3805 ಕಿಲೋಮೀಟರ್ ಉದ್ದದ ಈ ಪಯಣ ಇರಲಿದೆ.

ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ನ ಉಚ್ಚಿಲ ಶಾಖೆ ಉದ್ಘಾಟನೆ.-vishwanews24

ಸೈಕಲ್ ಪಯಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಬಡತನ ರೇಖೆಗಿಂತ ಕೆಲಗೆ ಇರುವ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದ ನನಗೆ ಸಾಧನೆ ಮಾಡುವ ಛಲ ಹಾಗೂ ಈ ದೇಶದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲಿಸುವ ಸಲುವಾಗಿ ಹಾಗೂ ಆರೋಗ್ಯಕ್ಕಾಗಿ ಪೆಡಲಿಂಗ್ ಎಂಬ ಉದ್ದೇಶದಿಂದ ಕನ್ಯಾಕುಮಾರಿಯಿಂದ ಲಡಾಕ್ ಗೆ ಸೈಕಲ್ ಪಯಣ ಮಾಡುತ್ತಿದ್ದು ಇದಕ್ಕೆ ಮನೆಯವರ ಸಂಪೂರ್ಣ ಸಹಕಾರ ಬೆಂಬಲ ಇದ್ದು ಫೆಬ್ರವರಿ ಸುಮಾರಿಗೆ ಲಡಾಕ್ ಮುಟ್ಟುವ ಗುರಿ ಇಟ್ಟುಕೊಂಡಿದ್ದೇನೆ ಎಂದರು”
ಸಂಜಯ್ ಅವರ ಸೈಕಲ್ ಪಯಣ ಸ್ವಾಗತಿಸುವಲ್ಲಿ ಆಸ್ಟೋನ್ ಬಂಗೇರ,ಇಬ್ರಾಹಿಂ,ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago