ಚೆನ್ನೈ : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ತಿರುಚನಾಪಳ್ಳಿಯ ಎಸ್ಆರ್ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ. ಚಾರುಕವಿ (23), ನೆಯ್ವೇಲಿ ನಿವಾಸಿ ಬಿ. ಗಾಯತ್ರಿ (25), ಕನ್ಯಾಕುಮಾರಿ ಸ್ಥಳೀಯ ಪಿ. ಸರ್ವದರ್ಶಿತ್ (23), ಡಿಂಡಿಗಲ್ ಸ್ಥಳೀಯ ಎಂ. ಪ್ರವೀಣ್ ಸಾಂ (23), ಆಂಧ್ರಪ್ರದೇಶದಲ್ಲಿರುವ ವೆಂಕಟೇಶ್ (24) ಮೃತಪಟ್ಟವರು.
ಕಾಲೇಜಿನ ಒಂದು ತಂಡ ತಮ್ಮ ಸಹಪಾಠಿಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ಕನ್ಯಾಕುಮಾರಿಗೆ ಆಗಮಿಸಿದ್ದರು. ಈ ವೇಳೆ ಕೆಲ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ಬಳಿ ಮುಚ್ಚಲ್ಪಟ್ಟಿರುವ ಲೇಮೂರ್ ಬೀಚ್ಗೆ ತೆಂಗಿನತೋಟವೊಂದರ ಮೂಲಕ ಸೋಮವಾರ ಮುಂಜಾನೆ ಪ್ರವೇಶ ಮಾಡಿದ್ದರು. ಇಲ್ಲಿ ನೀರಿನ ಮಟ್ಟ ಜಾಸ್ತಿ ಇತ್ತು. ಈಜು ಬಾರದೇ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಐವರೂ ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ ಎಂದು ಕನ್ಯಾಕುಮಾರಿ ಎಸ್.ಪಿ ಈ. ಸುಂದರವದನಂ ಎನ್ಡಿಟಿವಿಗೆ ತಿಳಿಸಿದ್ದಾರೆ. ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದ ಮೃತರು ಇನ್ನೇನು ಪದವಿ ಮುಗಿಸಿ ಕಾಲೇಜಿನಿಂದ ಹೊರಡುವವರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…