ಹೊಸದಿಲ್ಲಿ: ಬೇನಾಮಿ ಆಸ್ತಿ, ಕಪ್ಪು ಹಣ ವಿವರ ನೀಡಿದರೆ ಜನಸಾಮಾನ್ಯನೂ ಕೋಟ್ಯಧಿಪತಿ ಆಗಬಹುದು! ಇದು ಸುಳ್ಳಲ್ಲ. ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೊಸ ಯೋಜನೆ ಘೋಷಿಸಿದೆ. ಬೇನಾಮಿ ಆಸ್ತಿ ವಿವರ ನೀಡಿ ದವರಿಗೆ 1 ಕೋ. ರೂ., ವಿದೇಶದಲ್ಲಿ ಕಪ್ಪು ಹಣ ಇಟ್ಟಿರುವ ಭಾರತೀಯರ ಮಾಹಿತಿ ನೀಡಿದವರಿಗೆ 5 ಕೋ. ರೂ. ಬಹುಮಾನ ನೀಡುವುದಾಗಿ ಹೇಳಿದೆ.
ಅಷ್ಟೇ ಅಲ್ಲ, ಆದಾಯ ಮತ್ತು ಸ್ವತ್ತುಗಳ ಮಾಹಿತಿಯನ್ನು ಇಲಾಖೆಗೆ ತಪ್ಪಾಗಿ ನೀಡಿದವರ ಬಗ್ಗೆ ನಿಖರ ವಿವರ ನೀಡಿದರೂ 50 ಲಕ್ಷ ರೂ.ಗಳವರೆಗೆ ಬಹುಮಾನ ನೀಡಲಾಗುತ್ತದೆ. ಈ ಸಂಬಂಧ ಪ್ರಸ್ತುತ ಆದಾಯ ತೆರಿಗೆ ಮಾಹಿತಿದಾರರ ಬಹುಮಾನ ಯೋಜನೆಯ ನೀತಿಗಳನ್ನು ಬದಲಿಸಲಾಗಿದೆ.
ಬಹುಮಾನ ಸಿಗೋದು ಹೇಗೆ?
ಬೇನಾಮಿ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದಾಗ ಮಧ್ಯಾಂತರ ಬಹುಮಾನ ನೀಡಲಾಗುತ್ತದೆ. ಅಂತಿಮವಾಗಿ ಸ್ವತ್ತನ್ನು ವಶಪಡಿಸಿಕೊಂಡಾಗ ಒಟ್ಟು ಬಹುಮಾನ ಸಿಗುತ್ತದೆ. ಜಪ್ತಿ ಮಾಡಿದ 4 ತಿಂಗಳೊಳಗೆ ಸ್ವತ್ತಿನ ಶೇ.1ರಷ್ಟು ಅಥವಾ ಗರಿಷ್ಠ 10 ಲಕ್ಷ ರೂ. ಅನ್ನು ಮಧ್ಯಾಂತರವಾಗಿ ನೀಡಲಾಗುತ್ತದೆ. ಎರಡು ವರ್ಷದೊಳಗೆ ಯಾವುದೇ ಪ್ರಕರಣ ಈ ಸಂಬಂಧ ಬಾಕಿ ಇಲ್ಲದಿದ್ದರೆ ಪ್ರಕರಣ ಅಂತಿಮ ಎಂದು ಪರಿಗಣಿಸಿ, ಬಹುಮಾನದ ಮೊತ್ತ ಬಿಡುಗಡೆ ಮಾಡಲಾಗುತ್ತದೆ. ಆದರೆ ಜಪ್ತಿ ಮಾಡಿದ ಸ್ವತ್ತಿನ ಶೇ.5ರಷ್ಟು ಅಥವಾ ಗರಿಷ್ಠ 1 ಕೋಟಿ ರೂ. ಮಾತ್ರ ಬಹುಮಾನ ಸಿಗಲಿದೆ.
ವಿದೇಶಿಯರೂ ಸಹಿತ ಯಾವುದೇ ವ್ಯಕ್ತಿಯು ಜಂಟಿ ಅಥವಾ ಹೆಚ್ಚುವರಿ ಆದಾಯ ತೆರಿಗೆ ಆಯುಕ್ತರಿಗೆ ಮಾಹಿತಿ ನೀಡಬಹುದಾಗಿದೆ. ಆದರೆ ಮಾಹಿತಿ ನೀಡಿದ ವ್ಯಕ್ತಿಯ ಯಾವ ವಿವರಗಳನ್ನು ವ್ಯಕ್ತಿಯ ಭದ್ರತೆ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಬಹಿರಂಗಗೊಳಿಸಲಾಗುವುದಿಲ್ಲ. ಬೇನಾಮಿ ಸ್ವತ್ತುಗಳ ಬಹಿರಂಗಗೊಳಿಸುವಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಈ ಯೋಜನೆ ಘೋಷಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…