ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ಮಗ ತಂದೆಯನ್ನು ಕೊಲೆಗೈದ ಘಟನೆ ಸೋಮವಾರ ಕಾಸರಗೋಡಿನ ಪಳ್ಳಿ ಕೆರೆ ಎಂಬಲ್ಲಿ ನಡೆದಿದೆ.
ಪಳ್ಳಿ ಕೆರೆ ಥಿಯೇಟರ್ ಸಮೀಪದ ಅಪ್ಪು ಕುಂಞಿ(65) ಕೊಲೆಯಾದ ವ್ಯಕ್ತಿ.
ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪುತ್ರ ಪ್ರಮೋದ್ (37)ನನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುತ್ರ ಪ್ರಮೋದ್ ದಿನನಿತ್ಯ ಮನೆಯಲ್ಲಿ ತಂದೆಗೆ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಅಪ್ಪು ಕುಂಞಿಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಭಾನುವಾರ ಪ್ರಮೋದ್ ತಂದೆಯ ಕೊಲೆ ಗೆತ್ನಿಸಿದ್ದಾನೆ. ಬಳಿಕ ತಂದೆ ಅಪ್ಪು ಕುಂಞಿಪೊಲೀಸರಿಗೆ ಪುನಃ ದೂರು ನೀಡಿದ್ದು, ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು. ನಂತರ ಸೋಮವಾರ ಸಂಜೆ ಮನೆಗೆ ತಲುಪಿದ ಪುತ್ರ ಕಬ್ಬಿಣದ ರಾಡ್ ನಿಂದ ತಂದೆಯ ತಲೆಗೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆದ ಸ್ಥಳದಲ್ಲೇ ಅಪ್ಪು ಕುಂಞಿಅವರು ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…