ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ಮಗ ತಂದೆಯನ್ನು ಕೊಲೆಗೈದ ಘಟನೆ ಸೋಮವಾರ ಕಾಸರಗೋಡಿನ ಪಳ್ಳಿ ಕೆರೆ ಎಂಬಲ್ಲಿ ನಡೆದಿದೆ.
ಪಳ್ಳಿ ಕೆರೆ ಥಿಯೇಟರ್ ಸಮೀಪದ ಅಪ್ಪು ಕುಂಞಿ(65) ಕೊಲೆಯಾದ ವ್ಯಕ್ತಿ.
ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪುತ್ರ ಪ್ರಮೋದ್ (37)ನನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುತ್ರ ಪ್ರಮೋದ್ ದಿನನಿತ್ಯ ಮನೆಯಲ್ಲಿ ತಂದೆಗೆ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಅಪ್ಪು ಕುಂಞಿಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಭಾನುವಾರ ಪ್ರಮೋದ್ ತಂದೆಯ ಕೊಲೆ ಗೆತ್ನಿಸಿದ್ದಾನೆ. ಬಳಿಕ ತಂದೆ ಅಪ್ಪು ಕುಂಞಿಪೊಲೀಸರಿಗೆ ಪುನಃ ದೂರು ನೀಡಿದ್ದು, ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು. ನಂತರ ಸೋಮವಾರ ಸಂಜೆ ಮನೆಗೆ ತಲುಪಿದ ಪುತ್ರ ಕಬ್ಬಿಣದ ರಾಡ್ ನಿಂದ ತಂದೆಯ ತಲೆಗೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆದ ಸ್ಥಳದಲ್ಲೇ ಅಪ್ಪು ಕುಂಞಿಅವರು ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…