Featured

ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು – ದೇವಿಗೆ ನೈಸರ್ಗಿಕ ಪುಣ್ಯಸ್ನಾನ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು, ಇಂದು ಬೆಳಿಗ್ಗೆಯಿಂದ ಮತ್ತೆ ಮಳೆ ಪ್ರಾರಂಭವಾಗಿದೆ. ಮೈದುಂಬಿ ಹರಿಯುತ್ತಿರುವ ಕುಬ್ಜಾ ನದಿಯಿಂದ ಪ್ರಸಿದ್ದ ಕಮಲಶಿಲೆ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಿಗೆ ನೈಸರ್ಗಿಕ ಪುಣ್ಯಸ್ನಾನ ನೆರವೇರಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ನೆರೆ ಭೀತಿ ಉಂಟಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ ಹರಿಯುವ ಕುಬ್ಜಾ ನದಿ ಮೈದುಂಬಿ ಹರಿಯುತ್ತಿದ್ದು, ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ನದಿ ನೀರು ಬಂದಿದೆ.
ಆಷಾಢ ಅಥವಾ ಶ್ರಾವಣ ಮಾಸದ ಮಳೆಯಲ್ಲಿ ದುರ್ಗಾಪರಮೇಶ್ವರಿಗೆ ನೈಸರ್ಗಿಕ ಪುಣ್ಯಸ್ನಾನ ಆಗುವುದು ವಾಡಿಕೆ. ಈ ದೇವಾಲಯದ ಪಕ್ಕದಲ್ಲೇ ಹರಿಯುವ ಕುಬ್ಜಾ ನದಿನೀರು ದೇವಾಲಯದ ಗರ್ಭಗುಡಿಯೊಳಗೆ ಪ್ರವೇಶಿಸಿ, ತಾಯಿಗೆ ಅಭಿಷೇಕ ಮಾಡಿ, ಮತ್ತೆ ಇಳಿಮುಖವಾಗುತ್ತದೆ.

ಈ ಬಾರಿಯ ವಾಡಿಕೆಯಂತೆ ಗರ್ಭಗುಡಿಗೆ ನದಿ ನೀರು ಬಂದಿದ್ದು, ಜಲಾವೃತ ಆಗುತ್ತಿದ್ದಂತೆ ದೇವಿಗೆ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ಅಭಿಷೇಕಕ್ಕೆ ನೀರು ಬಂದ ಹಿನ್ನಲೆ ಭಕ್ತರು ಪುಳಕಗೊಂಡಿದ್ದು, ನದಿನೀರು ಗರ್ಭಗುಡಿ ಪ್ರವೇಶಿಸುತ್ತಿದ್ದಂತೇ ವಿಶೇಷ ಮಂಗಳಾರತಿ ನಡೆಯುತ್ತದೆ. ಇದಾದ ನಂತರ ಈ ನದಿ ನೀರಿನಲ್ಲಿ ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಗಮನಿಸಬೇಕಾದ ಅಂಶವೇನಂದರೆ, ಗರ್ಭಗುಡಿ ಪ್ರವೇಶಿಸುವ ನದಿನೀರು ಎಂದೂ ತಾಯಿಯ ಪಾದದ ಮೇಲೆ ಆವೃತವಾಗದೇ ಇರುವುದು ಇಲ್ಲಿನ ವಿಶೇಷ.

 

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

6 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

9 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

9 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

9 hours ago