ನವದೆಹಲಿ: ನಿರ್ಮಾಪಕ ಕರಣ್ ಜೋಹರ್ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್ ಪಡೆಯಬೇಕೆಂದು ನಟಿ ಕಂಗನಾ ರಣಾವತ್ ಮನವಿ ಮಾಡಿದ್ದಾರೆ.
ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಬಾಲಿವುಡ್ ಸ್ವಜನಪಕ್ಷಪಾತದ ಬಗ್ಗೆ ಧ್ವನಿ ಎತ್ತುತ್ತಿರುವ ಕಂಗನಾ ಈಗ ನೇರವಾಗಿಯೇ ಕರಣ್ ಜೋಹರ್ ವಿರುದ್ಧ ಸಿಡಿದೆದ್ದಿದ್ದಾರೆ.
ಟ್ವೀಟ್ ಮಾಡಿರುವ ಕಂಗನಾ, ಕರಣ್ ಜೋಹರ್ ಅವರಿಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್ ಪಡೆದುಕೊಳ್ಳಬೇಕು. ಅಂತರಾಷ್ಟ್ರೀಯ ವೇದಿಕೆಯಲ್ಲೇ ಸಿನಿಮಾ ರಂಗವನ್ನು ತೊರೆಯುವಂತೆ ನನಗೆ ಬೆದರಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ವಿರುದ್ಧ ಪಿತೂರಿ ನಡೆಸಿ ಅವರ ವೃತ್ತಿಜೀವನವನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಉರಿ ಹೋರಾಟದ ಸಮಯದಲ್ಲಿ ಪಾಕಿಸ್ತಾನ ಪರವಾಗಿದ್ದ ಕರಣ್ ಈಗ ರಾಷ್ಟ್ರ ವಿರೋಧಿ ಸಿನಿಮಾ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಕರಣ್ ಜೋಹರ್ ಮತ್ತು ಕಂಗನಾ ರಣಾವತ್ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪುರಸ್ಕರಿಸಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…