ನವದೆಹಲಿ: ನಿರ್ಮಾಪಕ ಕರಣ್ ಜೋಹರ್ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್ ಪಡೆಯಬೇಕೆಂದು ನಟಿ ಕಂಗನಾ ರಣಾವತ್ ಮನವಿ ಮಾಡಿದ್ದಾರೆ.
ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಬಾಲಿವುಡ್ ಸ್ವಜನಪಕ್ಷಪಾತದ ಬಗ್ಗೆ ಧ್ವನಿ ಎತ್ತುತ್ತಿರುವ ಕಂಗನಾ ಈಗ ನೇರವಾಗಿಯೇ ಕರಣ್ ಜೋಹರ್ ವಿರುದ್ಧ ಸಿಡಿದೆದ್ದಿದ್ದಾರೆ.
ಟ್ವೀಟ್ ಮಾಡಿರುವ ಕಂಗನಾ, ಕರಣ್ ಜೋಹರ್ ಅವರಿಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್ ಪಡೆದುಕೊಳ್ಳಬೇಕು. ಅಂತರಾಷ್ಟ್ರೀಯ ವೇದಿಕೆಯಲ್ಲೇ ಸಿನಿಮಾ ರಂಗವನ್ನು ತೊರೆಯುವಂತೆ ನನಗೆ ಬೆದರಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ವಿರುದ್ಧ ಪಿತೂರಿ ನಡೆಸಿ ಅವರ ವೃತ್ತಿಜೀವನವನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಉರಿ ಹೋರಾಟದ ಸಮಯದಲ್ಲಿ ಪಾಕಿಸ್ತಾನ ಪರವಾಗಿದ್ದ ಕರಣ್ ಈಗ ರಾಷ್ಟ್ರ ವಿರೋಧಿ ಸಿನಿಮಾ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಕರಣ್ ಜೋಹರ್ ಮತ್ತು ಕಂಗನಾ ರಣಾವತ್ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪುರಸ್ಕರಿಸಿದ್ದರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…