ನವದೆಹಲಿ: ನಿರ್ಮಾಪಕ ಕರಣ್ ಜೋಹರ್ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್ ಪಡೆಯಬೇಕೆಂದು ನಟಿ ಕಂಗನಾ ರಣಾವತ್ ಮನವಿ ಮಾಡಿದ್ದಾರೆ.
ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಬಾಲಿವುಡ್ ಸ್ವಜನಪಕ್ಷಪಾತದ ಬಗ್ಗೆ ಧ್ವನಿ ಎತ್ತುತ್ತಿರುವ ಕಂಗನಾ ಈಗ ನೇರವಾಗಿಯೇ ಕರಣ್ ಜೋಹರ್ ವಿರುದ್ಧ ಸಿಡಿದೆದ್ದಿದ್ದಾರೆ.
ಟ್ವೀಟ್ ಮಾಡಿರುವ ಕಂಗನಾ, ಕರಣ್ ಜೋಹರ್ ಅವರಿಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್ ಪಡೆದುಕೊಳ್ಳಬೇಕು. ಅಂತರಾಷ್ಟ್ರೀಯ ವೇದಿಕೆಯಲ್ಲೇ ಸಿನಿಮಾ ರಂಗವನ್ನು ತೊರೆಯುವಂತೆ ನನಗೆ ಬೆದರಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ವಿರುದ್ಧ ಪಿತೂರಿ ನಡೆಸಿ ಅವರ ವೃತ್ತಿಜೀವನವನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಉರಿ ಹೋರಾಟದ ಸಮಯದಲ್ಲಿ ಪಾಕಿಸ್ತಾನ ಪರವಾಗಿದ್ದ ಕರಣ್ ಈಗ ರಾಷ್ಟ್ರ ವಿರೋಧಿ ಸಿನಿಮಾ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಕರಣ್ ಜೋಹರ್ ಮತ್ತು ಕಂಗನಾ ರಣಾವತ್ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪುರಸ್ಕರಿಸಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…