Featured

ಕರಾವಳಿಗೆ ಪಡಿತರ ಕುಚ್ಚಲಕ್ಕಿ ವಿತರಣೆಗೆ ಅಸ್ತು ಎಂದ ಬೊಮ್ಮಾಯಿ : vishwanews24

ಕರಾವಳಿಗೆ ಪಡಿತರ ಕುಚ್ಚಲಕ್ಕಿ ವಿತರಣೆಗೆ ಅಸ್ತು ಎಂದ ಬೊಮ್ಮಾಯಿ ..

6,21,804 ಪಡಿತರ ಚೀಟಿ ಕುಟುಂಬಗಳಿಗೆ ಅನುಕೂಲವಾಗಲಿರುವ ಮಹತ್ವದ ಯೋಜನೆ

ಕೇರಳ‌ ಮಾದರಿಯಲ್ಲಿ ಈ ಯೋಜನೆ ಜಾರಿಗೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಅವರು ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಅವರು ನಿಯೋಗದ ಪ್ರಸ್ತಾವನೆಗೆ ಸಮ್ಮತಿಸಿ ಪ್ರಸ್ತಾವನೆಯಂತೆ ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಗುಣಮಟ್ಟದ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿರುವುದಾಗಿ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿ ಅಡಿ ಕುಚಲಕ್ಕಿಯನ್ನು ವಿತರಿಸಲು ಅಗತ್ಯವಿರುವ 299.33 ಕೋಟಿಗಳಷ್ಟು ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಯವರು ಒಪ್ಪಿದ್ದು ಕರಾವಳಿಗರ ಪರವಾಗಿ ಮಾನ್ಯ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು, ಈ ಯೋಜನೆ ಅನುμÁ್ಠನದಿಂದ 6,21,804 ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಅನುಕೂಲವಾಗಲಿದೆ.

ಪ್ರಸ್ತುತ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಅಕ್ಕಿಯ ಪ್ರಮಾಣದಲ್ಲಿ ಶೇ. 50% ರಷ್ಟು ಕುಚಲಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಈ ಅಕ್ಕಿಯ ಪ್ರಮಾಣವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡಲಾಗುತ್ತಿದೆ. ಅದರೆ ಈ ಕುಚಲಕ್ಕಿಯಲ್ಲಿ ರುಚಿಯ ಪ್ರಮಾಣ ಕಡಿಮೆ ಇದ್ದು ಇದರ ಆಹಾರವನ್ನು ಸೇವಿಸಲಾಗುವುದಿಲ್ಲ ಎಂಬುದಾಗಿ ಆ ಭಾಗದ ಪಡಿತರ ಚೀಟಿದಾರರಿಂದ ದೂರುಗಳು ಬಂದಿದೆ. ಈ ಬಗ್ಗೆ ಆ ಭಾಗದ ಸ್ಥಳಿಯ ಶಾಸಕರ ವತಿಯಿಂದಲೂ ದೂರುಗಳು ಬಂದ ಹಿನ್ನೆಲೆಯಲ್ಲಿ ಕುಚಲಕ್ಕಿಯನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡದೇ ಸ್ಥಳಿಯವಾಗಿ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿಸಿ ಅದರಿಂದ ಕುಚಲಕ್ಕಿಯನ್ನಾಗಿ ಪರಿವರ್ತಿಸಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿದಾರರಿಗೆ ವಿತರಿಸಿದರೆ, ಅದನ್ನು ಒಳ್ಳೆಯ ಆಹಾರವನ್ನಾಗಿ ಉಪಯೋಗಿಸುವರು ಹಾಗೂ ಇದರಿಂದ ಸ್ಥಳೀಯ ರೈತರಿಗೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಯವರಿಗೆ ವಿವರಿಸಲಾಯಿತು.

ಈಗಾಗಲೆ ಕೇರಳ ರಾಜ್ಯ ಈ ವ್ಯವಸ್ಥೆಯನ್ನು ಅಳವಡಿಕೊಂಡಿರುವುದಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಪ್ರಸ್ತುತ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಕುಚಲಕ್ಕಿಯನ್ನು ಉಪಯೋಗಿಸುತ್ತಿದ್ದು. ಸದರಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕೇರಳ ರಾಜ್ಯದ ಮಾದರಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಿ ಪರಿವರ್ತಿತ ಕುಚಲಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಿದರೆ ಆ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುವ ಬಗ್ಗೆ ವಿವರಿಸಲಾಗಿದೆ.

ನಮ್ಮ ನಿಯೋಗದ ಮನವಿಯನ್ನು ಕುಲಂಕುಂಶವಾಗಿ ಆಲಿಸಿದ ಮುಖ್ಯಮಂತ್ರಿಯವರು ಪ್ರಸ್ತಾವನೆಗೆ ಸಮ್ಮತಿ ಸೂಚಿಸಿ ಸಂಬಂಧಿಸಿದ ಅನುದಾನ ಬಿಡುಗಡೆ ಮಾಡಲು ಒಪ್ಪಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

 

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

8 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

9 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

10 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

10 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

10 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

10 hours ago