Featured

ಕರಾವಳಿಗೆ ಹೆಚ್ಚಿನ ಭದ್ರತೆ : ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪ್ಯಾಟ್ರೋಲ್ ಹಡಗುಗಳು ಸೇರ್ಪಡೆ -Vishwanews24

ಕರಾವಳಿಗೆ ಹೆಚ್ಚಿನ ಭದ್ರತೆ – ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪ್ಯಾಟ್ರೋಲ್ ಹಡಗುಗಳು ಸೇರ್ಪಡೆ -Vishwanews24

ಕಾರವಾರ: ಪಾಕಿಸ್ತಾನದಿಂದ ಉಗ್ರರು ಸಮುದ್ರ ಮಾರ್ಗ ಮೂಲಕ ಬಂದು ಮುಂಬೈ ಮೇಲೆ ದಾಳಿ ನಡೆಸಿದ ಬಳಿಕ ಭಾರತೀಯ ಕೋಸ್ಟ್ ಗಾರ್ಡ್ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುತ್ತಾ ಬಂದಿದ್ದು, ಈಗ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳು(ಎಫ್‍ಪಿವಿ) ಸೇರ್ಪಡೆಯಾಗಿದೆ.

ಭದ್ರತೆ, ಸಮುದ್ರಮಾರ್ಗದ ಕಳ್ಳಸಾಗಾಣಿಕೆ ತಡೆಯುವವ ಹಾಗೂ ಸಮುದ್ರದಲ್ಲಿ ತೊಂದರೆಗೆ ಸಿಲುಕುವ ಮೀನುಗಾರರ ರಕ್ಷಣೆಗೆ ಭಾರತೀಯ ಕೋಸ್ಟ್ ಗಾರ್ಡ್ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳನ್ನು ಕಾರವಾರ ವಿಭಾಗಗಕ್ಕೆ ನಿಯೋಜಿಸುವ ಮೂಲಕ ಉತ್ತರ ಕನ್ನಡದ ಕರಾವಳಿಯ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿಎಸ್) ಕಾರವಾರ ಘಟಕವು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮಾಜಾಳಿಯಿಂದ ದಕ್ಷಿಣದ ಭಟ್ಕಳದವರೆಗೆ ತನ್ನ ವ್ಯಾಪ್ತಿ ಹೊಂದಿದೆ.

ಉಡುಪಿ : ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಬೈಂದೂರು ಮೂಲದ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಘವೇಂದ್ರ -Vishwanews24

ಕಾರವಾರದಲ್ಲಿ ಐಸಿಜಿಎಸ್ 2009ರ ನವೆಂಬರ್ 4 ರಿಂದ ಕಾರ್ಯಾರಂಭ ಮಾಡಿದಾಗಿನಿಂದ 2 ಇಂಟರ್‌ ಸೆಪ್ಟರ್‌ ಬೋಟ್‍ಗಳು ಮತ್ತು 2 ಇಂಟರ್‌ ಸೆಪ್ಟರ್‌ ಕ್ರಾಫ್ಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು.

ಇಂದಿನಿಂದ ಐಸಿಜಿಎಸ್ ಸಾವಿತ್ರಿಬಾಯಿ ಪುಲೆ ಮತ್ತು ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಎಂಬ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳನ್ನು ಇದೀಗ ಕಾರವಾರಕ್ಕೆ ನಿಯೋಜಿಸಿದೆ. ಈ ಎರಡೂ ಹಡಗುಗಳು ಈ ಮೊದಲು ನವ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಹಡಗುಗಳು ಗೋವಾ ಶಿಪ್‍ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಫಾಸ್ಟ್ ಪ್ಯಾಟ್ರೋಲ್ ಹಡಗುಗಳಾಗಿವೆ.

ಹಡಗಿನ ವಿಶೇಷತೆ ಏನು?
ಈ ಹಡಗುಗಳು ಗಂಟೆಗೆ 35 ನಾಟ್ಸ್ ವೇಗವನ್ನು ಕ್ರಮಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದು, ರಕ್ಷಣೆಗೆ 30 ಎಂ.ಎಂಸಿ.ಆರ್.ಎನ್ ಗನ್ ಹೊಂದಿದೆ. ಇವುಗಳನ್ನು ಉನ್ನತೀಕರಿಸಿ ಉಪಗ್ರಹ ಸಂವಹನ ಮತ್ತು ಸಂಚರಣೆ ವ್ಯವಸ್ಥೆಗಳೊಂದಿಗೆ ಅಳವಡಿಸಲಾಗಿದೆ. ಹಡಗುಗಳನ್ನು ಕಣ್ಗಾವಲು, ಗಸ್ತು ತಿರುಗಲು ವಿನ್ಯಾಸಗೊಳಿಸಲಾಗಿದೆ.

ಇದು ಆಳವಿಲ್ಲದ ನೀರಿನ ಕಾರ್ಯಾಚರಣೆಗೂ ಸಮರ್ಥವಾಗಿದೆ. ಎಫ್‍ಪಿವಿಗಳು ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆ, ಕಡಲ್ಗಳ್ಳತನ ವಿರೋಧಿ ಗಸ್ತು, ಮೀನುಗಾರಿಕೆ ರಕ್ಷಣೆ ಮತ್ತು ಶೋಧ ಹಾಗೂ ಪಾರುಗಾಣಿಕಾ ಕಾರ್ಯಾಚರಣೆಗಳಿಗೆ ಸಹ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ.

ಈ ಹಿಂದೆ ಈ ಎರಡೂ ಹಡಗುಗಳು ಹಲವಾರು ಎಸ್.ಎ.ಆರ್ ಕಾರ್ಯಾಚರಣೆಗಳು, ಕಡಲ್ಗಳ್ಳತನ ವಿರೋಧಿ ಗಸ್ತು ಮತ್ತು ಕಣ್ಗಾವಲು ಪ್ರಯತ್ನಗಳಲ್ಲಿ ಭಾಗಿಯಾಗಿವೆ. ಇದಲ್ಲದೆ ಹಲವಾರು ಸಂದರ್ಭಗಳಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಇವುಗಳ ಮೂಲಕ ನೆರವು ನೀಡಲಾಗಿದೆ.

ಕದಂಬ ನೌಕಾ ನೆಲೆ, ಕೈಗಾ ಅಣು ಸ್ಥಾವರದಂತಹ ಮಹತ್ತರ ಯೋಜನೆಗಳ ಮೇಲೆ ಸಮುದ್ರ ಮಾರ್ಗದಿಂದ ದಾಳಿ ಮಾಡದಂತೆ ಕರಾವಳಿ ಭಾಗದಲ್ಲಿ ಭದ್ರತೆಗೆ ನೀಡಲಿದ್ದು ಕಾರವಾರ ಭಾಗದ ಕೋಸ್ಟ್ ಗಾರ್ಡ್‌ ವಿಭಾಗಕ್ಕೆ ಹೆಚ್ಚಿನ ಬಲ ಬಂದಂತಾಗಿದೆ.

ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago