Featured

ಕರಾವಳಿಗೆ ಹೆಚ್ಚಿನ ಭದ್ರತೆ : ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪ್ಯಾಟ್ರೋಲ್ ಹಡಗುಗಳು ಸೇರ್ಪಡೆ -Vishwanews24

ಕರಾವಳಿಗೆ ಹೆಚ್ಚಿನ ಭದ್ರತೆ – ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪ್ಯಾಟ್ರೋಲ್ ಹಡಗುಗಳು ಸೇರ್ಪಡೆ -Vishwanews24

ಕಾರವಾರ: ಪಾಕಿಸ್ತಾನದಿಂದ ಉಗ್ರರು ಸಮುದ್ರ ಮಾರ್ಗ ಮೂಲಕ ಬಂದು ಮುಂಬೈ ಮೇಲೆ ದಾಳಿ ನಡೆಸಿದ ಬಳಿಕ ಭಾರತೀಯ ಕೋಸ್ಟ್ ಗಾರ್ಡ್ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುತ್ತಾ ಬಂದಿದ್ದು, ಈಗ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳು(ಎಫ್‍ಪಿವಿ) ಸೇರ್ಪಡೆಯಾಗಿದೆ.

ಭದ್ರತೆ, ಸಮುದ್ರಮಾರ್ಗದ ಕಳ್ಳಸಾಗಾಣಿಕೆ ತಡೆಯುವವ ಹಾಗೂ ಸಮುದ್ರದಲ್ಲಿ ತೊಂದರೆಗೆ ಸಿಲುಕುವ ಮೀನುಗಾರರ ರಕ್ಷಣೆಗೆ ಭಾರತೀಯ ಕೋಸ್ಟ್ ಗಾರ್ಡ್ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳನ್ನು ಕಾರವಾರ ವಿಭಾಗಗಕ್ಕೆ ನಿಯೋಜಿಸುವ ಮೂಲಕ ಉತ್ತರ ಕನ್ನಡದ ಕರಾವಳಿಯ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿಎಸ್) ಕಾರವಾರ ಘಟಕವು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮಾಜಾಳಿಯಿಂದ ದಕ್ಷಿಣದ ಭಟ್ಕಳದವರೆಗೆ ತನ್ನ ವ್ಯಾಪ್ತಿ ಹೊಂದಿದೆ.

ಉಡುಪಿ : ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಬೈಂದೂರು ಮೂಲದ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಘವೇಂದ್ರ -Vishwanews24

ಕಾರವಾರದಲ್ಲಿ ಐಸಿಜಿಎಸ್ 2009ರ ನವೆಂಬರ್ 4 ರಿಂದ ಕಾರ್ಯಾರಂಭ ಮಾಡಿದಾಗಿನಿಂದ 2 ಇಂಟರ್‌ ಸೆಪ್ಟರ್‌ ಬೋಟ್‍ಗಳು ಮತ್ತು 2 ಇಂಟರ್‌ ಸೆಪ್ಟರ್‌ ಕ್ರಾಫ್ಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು.

ಇಂದಿನಿಂದ ಐಸಿಜಿಎಸ್ ಸಾವಿತ್ರಿಬಾಯಿ ಪುಲೆ ಮತ್ತು ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಎಂಬ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳನ್ನು ಇದೀಗ ಕಾರವಾರಕ್ಕೆ ನಿಯೋಜಿಸಿದೆ. ಈ ಎರಡೂ ಹಡಗುಗಳು ಈ ಮೊದಲು ನವ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಹಡಗುಗಳು ಗೋವಾ ಶಿಪ್‍ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಫಾಸ್ಟ್ ಪ್ಯಾಟ್ರೋಲ್ ಹಡಗುಗಳಾಗಿವೆ.

ಹಡಗಿನ ವಿಶೇಷತೆ ಏನು?
ಈ ಹಡಗುಗಳು ಗಂಟೆಗೆ 35 ನಾಟ್ಸ್ ವೇಗವನ್ನು ಕ್ರಮಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದು, ರಕ್ಷಣೆಗೆ 30 ಎಂ.ಎಂಸಿ.ಆರ್.ಎನ್ ಗನ್ ಹೊಂದಿದೆ. ಇವುಗಳನ್ನು ಉನ್ನತೀಕರಿಸಿ ಉಪಗ್ರಹ ಸಂವಹನ ಮತ್ತು ಸಂಚರಣೆ ವ್ಯವಸ್ಥೆಗಳೊಂದಿಗೆ ಅಳವಡಿಸಲಾಗಿದೆ. ಹಡಗುಗಳನ್ನು ಕಣ್ಗಾವಲು, ಗಸ್ತು ತಿರುಗಲು ವಿನ್ಯಾಸಗೊಳಿಸಲಾಗಿದೆ.

ಇದು ಆಳವಿಲ್ಲದ ನೀರಿನ ಕಾರ್ಯಾಚರಣೆಗೂ ಸಮರ್ಥವಾಗಿದೆ. ಎಫ್‍ಪಿವಿಗಳು ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆ, ಕಡಲ್ಗಳ್ಳತನ ವಿರೋಧಿ ಗಸ್ತು, ಮೀನುಗಾರಿಕೆ ರಕ್ಷಣೆ ಮತ್ತು ಶೋಧ ಹಾಗೂ ಪಾರುಗಾಣಿಕಾ ಕಾರ್ಯಾಚರಣೆಗಳಿಗೆ ಸಹ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ.

ಈ ಹಿಂದೆ ಈ ಎರಡೂ ಹಡಗುಗಳು ಹಲವಾರು ಎಸ್.ಎ.ಆರ್ ಕಾರ್ಯಾಚರಣೆಗಳು, ಕಡಲ್ಗಳ್ಳತನ ವಿರೋಧಿ ಗಸ್ತು ಮತ್ತು ಕಣ್ಗಾವಲು ಪ್ರಯತ್ನಗಳಲ್ಲಿ ಭಾಗಿಯಾಗಿವೆ. ಇದಲ್ಲದೆ ಹಲವಾರು ಸಂದರ್ಭಗಳಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಇವುಗಳ ಮೂಲಕ ನೆರವು ನೀಡಲಾಗಿದೆ.

ಕದಂಬ ನೌಕಾ ನೆಲೆ, ಕೈಗಾ ಅಣು ಸ್ಥಾವರದಂತಹ ಮಹತ್ತರ ಯೋಜನೆಗಳ ಮೇಲೆ ಸಮುದ್ರ ಮಾರ್ಗದಿಂದ ದಾಳಿ ಮಾಡದಂತೆ ಕರಾವಳಿ ಭಾಗದಲ್ಲಿ ಭದ್ರತೆಗೆ ನೀಡಲಿದ್ದು ಕಾರವಾರ ಭಾಗದ ಕೋಸ್ಟ್ ಗಾರ್ಡ್‌ ವಿಭಾಗಕ್ಕೆ ಹೆಚ್ಚಿನ ಬಲ ಬಂದಂತಾಗಿದೆ.

ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago