Featured

ಕರಾವಳಿಯನ್ನು ನಾವು ದತ್ತು ತಗೊಂಡಿದ್ದೇವೆ. ಕರ್ನಾಟಕ ಕರಾವಳಿ ನಮ್ಮದೇ: ಶೋಭಾ ಕರಂದ್ಲಾಜೆ

ಉಡುಪಿ: ರಾಹುಲ್ ಗಾಂಧಿ ಚುನಾವಣೆ ಬಂದ್ರೆ ಮಾನಸ ಸರೋವರ ಕೇದಾರ ಕೈಲಾಸ ಹೋಗ್ತಾರೆ ಉಳಿದ ದಿನಗಳಲ್ಲಿ ಚರ್ಚ್ ಗೆ ಹೋಗ್ತಾರೆ ಅದೇ ಡಿಕೆ ಶಿವಕುಮಾರ್ ಚುನಾವಣೆ ಬಂದಾಗ ದೇವಸ್ಥಾನ ತಿರುಗುತ್ತಾರೆ ಇದು ಕಾಂಗ್ರೆಸಿಗರ ನೀತಿ ಆದರೆ ದೇವರ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಾ ಇಲ್ಲ ನಾವು ದೇವರ ಪರ ನಿಂತವರು ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು

ಹಿಂದೂ ಧರ್ಮ ಬಿಜೆಪಿಗರ ಸ್ವತ್ತಾ? ಡಿಕೆಶಿ ಪ್ರಶ್ನೆಗೆ ಶೋಭಾ ತಿರುಗೇಟು ನೀಡಿ ಹೌದು, ಖಂಡಿತವಾಗಿಯೂ ಕರಾವಳಿಯನ್ನು ನಾವು ದತ್ತು ತಗೊಂಡಿದ್ದೇವೆ. ಕರ್ನಾಟಕ ಕರಾವಳಿ ನಮ್ಮದೇ ಆಗಿದ್ದು ಉಡುಪಿಯ ಐವರು ಶಾಸಕರು ಬಿಜೆಪಿಯವರೇ ಆಗಿದ್ದು ಈ ಭಾಗವನ್ನು ದತ್ತು ತಗೊಳ್ತೇವೆ, ಅಭಿವೃದ್ಧಿನೂ ಮಾಡುತ್ತೇವೆ ಎಂದ ಅವರು, ಕಾಂಗ್ರೆಸ್ ಜನವಿರೋಧಿ ನೀತಿಗೆ ಕರಾವಳಿ ಜನ ತಕ್ಕ ಪಾಠ ಕಲಿಸಿದ್ದಾರೆ ಡಿಕೆ ಶಿವಕುಮಾರ ಯಾವ ಆಟವೂ ಕರಾವಳಿಯಲ್ಲಿ ನಡೆಯಲ್ಲ ಎಂದು ಅವರು ಹೇಳಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ ಶೋಭಾ ನಿಮಗೆ ಗೊತ್ತಿರುವ ಮಾಹಿತಿ ಮೊದಲು ಬಹಿರಂಗಪಡಿಸಿ ಅದನ್ನು ಬಿಟ್ಟು ಬುಟ್ಟಿಯಲ್ಲಿ ಹಾವಿದೆ ಹಾವಿದೆ ಎಂದು ಹೆದರಿಸುವುದನ್ನು ಬಿಡಿ. ಸಾಧ್ಯವಿದ್ದರೆ ಆ ಹಾವನ್ನು ಹೊರಗೆ ಬಿಡಿ ಈ ಪ್ರಕರಣದಲ್ಲಿ ನಿಮ್ಮ ಷಡ್ಯಂತ್ರ ಏನಾದರೂ ಇದೆಯಾ? ನಮ್ಮ ನಾಯಕರ ವಿರುದ್ಧ ಏನು ಶಡ್ಯಂತ್ರ ಮಾಡಿದ್ದೀರಿ ಮೊದಲ ಸ್ಪಷ್ಟಪಡಿಸಿ ಯಾವ ಹಾವನ್ನು ಬಿಡ್ತೀರೋ ಕಾದು ನೋಡೋಣ ಎಂದು ಹೇಳಿದರು.

ಸುಳ್ಳು ಹೇಳುವುದರಲ್ಲಿ ಯಡಿಯೂರಪ್ಪ ಮಿನಿ ಮೋದಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹೇಗೆ ಆಡಳಿತ ಮಾಡಿದ್ದಾರೆ ನೋಡಿದ್ದೇವೆ. ಅವರು ಕೋಮುಗಳನ್ನು ಒಡೆದು ಆಳುವ ನೀತಿ ಮಾಡಿದ್ದಲ್ಲದೆ ಜಾತಿ ಜಾತಿಯನ್ನು ಒಡೆಯುವ ನೀತಿ ಮಾಡಿದರು. ಅಭಿವೃದ್ಧಿಗಿಂತ ಹೆಚ್ಚಾಗಿ ಜಾತಿ ಒಡೆಯುವುದರಲ್ಲಿ ಮಗ್ನರಾಗಿದರು ನರೇಂದ್ರ ಮೋದಿ ಕೊಟ್ಟ ಅಕ್ಕಿ ಗೋಧಿ ಬಳಕೆ ಮಾಡಿಕೊಂಡರು ನಾನೇ ಅನ್ನಭಾಗ್ಯ ಯೋಜನೆ ಕೊಟ್ಟೆ ಎಂದು ಸುಳ್ಳು ಹೇಳಿದರು. ಸುಳ್ಳು ಹೇಳುವುದರಲ್ಲಿ ಯಾರಾದರೂ ನಿಪುಣರು ಇದ್ದರೆ ಅದು ಕಾಂಗ್ರೆಸ್ಸಿನವರು ಸುಳ್ಳು ಹೇಳುವುದು ಕಾಂಗ್ರೆಸ್ಸಿನ ಚಾಳಿ ಎಂದ ಶೋಭಾ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅಥವಾ ಬೇರೆಲ್ಲೂ ಭವಿಷ್ಯವಿಲ್ಲ ಅಲ್ಲದೆ ಸಿದ್ದರಾಮಯ್ಯ ಮಾತಿಗೆ ಯಾರೂ ಬೆಲೆ ಕೊಡುವುದಿಲ್ಲ ಎಂದರು.

ವರದಿ: ಬ್ಯುರೋ ರಿಪೋರ್ಟ್-ವಿಶ್ವನ್ಯೂಸ್24

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

22 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

1 day ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 day ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 day ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 day ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

1 day ago