ಉಡುಪಿ:ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.
ಸಿಎಂ ಕುಮಾರಸ್ವಾಮಿ ಕರಾವಳಿಯನ್ನು ಉದ್ಧಾರ ಮಾಡಿಲ್ಲ ಅಂತ ಸಿಎಂ ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ. ಕರಾವಳಿಗರಿಗೆ ತಿಳುವಳಿಕೆ ಕಡಿಮೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಕರಾವಳಿ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ ಅಂತ ವಾಗ್ದಾಳಿ ನಡೆಸಿದರು.
”ಬಜೆಟ್ನಲ್ಲಿ ಕರಾವಳಿಗೆ ಅನ್ಯಾಯ ಮಾಡಿದ್ದೀರಿ. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದನ್ನು ಮರೆತು ಬಿಟ್ರಾ ಎಂದು ಪ್ರಶ್ನಿಸಿದ್ರು. ಅಲ್ಲದೆ ಯಾವ ಸಿಎಂ ಕೂಡ ನಿಮ್ಮಷ್ಟು ಕರಾವಳಿಯನ್ನು ಅವಹೇಳನ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಕರಾವಳಿಯ ಅಭಿವೃದ್ಧಿಗೆ ದೇವೇಗೌಡರ ಕುಟುಂಬ ಕಾರಣ ಅಲ್ಲ. ರೇವಣ್ಣ ಲೋಕೋಪಯೋಗಿ ಇಲಾಖೆಯಿಂದ ಕರಾವಳಿಗೆ ಏನು ಕೊಟ್ಟಿದ್ದೀರಿ. ಬಂದರು ಅಭಿವೃದ್ಧಿಗೆ ಸಿಎಂ ಏನು ಕೊಟ್ಟಿದ್ದೀರಿ. ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜಿಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸುತ್ತಾರೆ” ಎಂದು ಗರಂ ಆದರು.
ನಿಮಗೆ ಮತ ಹಾಕಿಲ್ಲ ಅಂತ ಕರಾವಳಿ ಜನರನ್ನು ಅವಹೇಳನ ಮಾಡ್ತೀರಾ? ಹೀಗಾಗಿ ಕರಾವಳಿಗರಲ್ಲಿ ಕ್ಷಮೆ ಕೇಳಿ ಅಂತ ಒತ್ತಾಯಿಸಿದರು. ವಿಧಾನಸೌಧದ ಎದುರು ಕರಾವಳಿ ಶಾಸಕರು ಧರಣಿ ಕೂತಿದ್ದು ಮರೆತ್ರಾ? ಕರಾವಳಿಗೆ ನಿಮ್ಮ ಕೊಡುಗೆ ಏನಂತ ಮೊದಲು ಹೇಳಿ? ಉಡುಪಿ ಜನ ನಿಮ್ಮ ಮೇಲೆ ತಿರುಗಿ ಬಿದ್ದಿದ್ದಾರೆ ಅಂತ ಹರಿಹಾಯ್ದರು.
ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿಗರು ಬೆಲೆ ನೀಡಲ್ಲ. ನಿಮ್ಮ ಪಕ್ಷಕ್ಕೆ ವಿದ್ಯಾವಂತ ಜನರು ವೋಟ್ ಹಾಕಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ತಕ್ಕಪಾಠ ಕಲಿಸ್ತಾರೆ ಅಂತ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…