Featured

ಕರಾವಳಿಯಲ್ಲಿ ಅಯ್ಯಪ್ಪ ಭಕ್ತರಿಂದ ಭವನಂ ಸನ್ನಿಧಾನಂ ಅಭಿಯಾನ -Vishwanews24

ಕರಾವಳಿಯಲ್ಲಿ ಅಯ್ಯಪ್ಪ ಭಕ್ತರಿಂದ ಭವನಂ ಸನ್ನಿಧಾನಂ ಅಭಿಯಾನ -Vishwanews24

ಉಡುಪಿ: ಕೇರಳ ಸರಕಾರದ ವಿರುದ್ಧ ಉಡುಪಿಯ 70 ಸಾವಿರ ಅಯ್ಯಪ್ಪ ಭಕ್ತರು ಆಕ್ರೋಶಗೊಂಡಿದ್ದಾರೆ. ಶಬರಿಮಲೆ ಪ್ರವೇಶ ಮುನ್ನ ಎರಡು ಬಾರಿ ಕೋವಿಡ್ ಟೆಸ್ಟ್ ನಿಯಮ ರೂಪಿಸಿರುವ ಪಿಣರಾಯಿ ಸರ್ಕಾರದ ವಿರುದ್ಧ ಈಗ ಕರಾವಳಿಯಲ್ಲಿ ಭವನಂ ಸನ್ನಿಧಾನಂ ಅಭಿಯಾನ ಶುರುವಾಗಿದೆ.

ಜಿಲ್ಲೆಯಿಂದ ಪ್ರತಿವರ್ಷ 70 ಸಾವಿರಕ್ಕಿಂತಲೂ ಹೆಚ್ಚು ಮಂದಿ ಕೇರಳದ ಶಬರಿಮಲೆಗೆ ಧಾರ್ಮಿಕ ಯಾತ್ರೆ ಮಾಡುತ್ತಾರೆ. ಜನವರಿ ತಿಂಗಳಲ್ಲಿ ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕೆ 40 ಸಾವಿರಕ್ಕಿಂತಲೂ ಹೆಚ್ಚು ಭಕ್ತರು ತೆರಳುತ್ತಾರೆ. ವಿಶ್ವಾದ್ಯಂತ ವ್ಯಾಪಿಸಿರುವ ಕರೋನಾ ಮಹಾಮಾರಿ ರೋಗದಿಂದ ಈ ಬಾರಿ ಶಬರಿಮಲೆ ಪ್ರವೇಶ ಕಷ್ಟಕರವಾಗಿದೆ. ಕೇರಳ ಸರ್ಕಾರ ಲೆಕ್ಕಕ್ಕಿಂತ ಹೆಚ್ಚು ನಿಯಮಾವಳಿಗಳನ್ನು ವಿಧಿಸಿದೆ. ಕರ್ನಾಟಕದಿಂದ ತೆರಳುವ ಭಕ್ತರು ಕೋವಿಡ್ ಟೆಸ್ಟ್ ಮಾಡಿರಬೇಕು. ನೀಲಕಲ್ ಎಂಬಲ್ಲಿ ಇನ್ನೊಂದು ಕೋವಿಡ್ ಟೆಸ್ಟ್ ಮಾಡಿಸಬೇಕು. ಪಂಪಾ ನದಿ ತೀರದಲ್ಲಿ ಮತ್ತೊಂದು ಬಾರಿ ಟೆಸ್ಟ್ ಮಾಡಿಸಬೇಕು ಎಂದಿದೆ. ಈ ದುಬಾರಿ ನಿಯಮ ಉಡುಪಿಯ ಅಯ್ಯಪ್ಪ ಭಕ್ತರನ್ನ ಕೆರಳಿಸಿದೆ.

ಇಷ್ಟೆಲ್ಲಾ ನಿಯಮಾವಳಿಯ ಸಹವಾಸವೇ ಬೇಡ ಅಂತ ಪಂದಳಕಂದನ ಸನ್ನಿಧಾನಕ್ಕೆ ತೆರಳದೆ ‘ಭವನಂ ಸನ್ನಿಧಾನಂ’ ಅಭಿಯಾನವನ್ನು ಉಡುಪಿಯಲ್ಲಿ ಶುರುಮಾಡಿದ್ದಾರೆ. ಈ ಅಭಿಯಾನದ ಪ್ರಕಾರ ಮನೆಯಲ್ಲೇ ಇದ್ದು ಕುಟುಂಬ ಸಮೇತ ಅಯ್ಯಪ್ಪ ಆರಾಧನೆ ಮಾಡಲು ನಿರ್ಧರಿಸಿದ್ದಾರೆ. ಎರಡೆರಡು ಕೋವಿಡ್ ಟೆಸ್ಟ್ ಮಾಡಲಿರುವ, ಇರುಮುಡಿ ವಾಪಾಸ್ ಕೊಡದ, ಭಕ್ತರ ತುಪ್ಪ ಸ್ವೀಕರಿಸದ, ಊಟ ಹಾಗೂ ತಂಗಲು ವ್ಯವಸ್ಥೆ ಮಾಡದ ದೇಗಲ ಆಡಳಿತ ಮಂಡಳಿ, ಕೇರಳ ಸರಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಯೊಂದಿಗೆ ಕೇರಳ ಸರ್ಕಾರ ಚೆಲ್ಲಾಟವಾಡುತ್ತಿದೆ. ಮೂರು ಮೂರು ಬಾರಿ ಕೋವಿಡ್ ಟೆಸ್ಟ್ ಮಾಡುವ ಅವಶ್ಯಕತೆ ಏನಿದೆ ಎಂದು ಅಯ್ಯಪ್ಪ ಭಕ್ತರು ಅಯ್ಯಪ್ಪ ಮಂದಿರಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ಆಕ್ರೋಶದ ಫಲವೇ ಇದೀಗ ಉಡುಪಿ ಜಿಲ್ಲೆಯ ಅಯ್ಯಪ್ಪ ಮಾಲಾಧಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯ ಲಕ್ಷಾಂತರ ಅಯ್ಯಪ್ಪ ಭಕ್ತರು ಭವನಂ ಸನ್ನಿಧಾನಂ ಅಭಿಯಾನದ ಜೊತೆ ಕೈಜೋಡಿಸಿ ಅಯ್ಯಪ್ಪ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸುವುದು ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ನಡೆಸುವುದು. ಯಾವುದೇ ಶಿಬಿರಗಳನ್ನು ಮಾಡದೆ ಮನೆಗಳಲ್ಲೇ ಅಯ್ಯಪ್ಪ ದೇವರನ್ನ ಕುಟುಂಬ ಸಮೇತವಾಗಿ ನಿಯಮ ನಿಷ್ಠೆಯಿಂದ ಆರಾಧಿಸಲು ತೀರ್ಮಾನಿಸಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

13 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

17 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

18 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

18 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

18 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

19 hours ago