Featured

ಕರಾವಳಿಯಲ್ಲಿ ಅಯ್ಯಪ್ಪ ಭಕ್ತರಿಂದ ಭವನಂ ಸನ್ನಿಧಾನಂ ಅಭಿಯಾನ -Vishwanews24

ಕರಾವಳಿಯಲ್ಲಿ ಅಯ್ಯಪ್ಪ ಭಕ್ತರಿಂದ ಭವನಂ ಸನ್ನಿಧಾನಂ ಅಭಿಯಾನ -Vishwanews24

ಉಡುಪಿ: ಕೇರಳ ಸರಕಾರದ ವಿರುದ್ಧ ಉಡುಪಿಯ 70 ಸಾವಿರ ಅಯ್ಯಪ್ಪ ಭಕ್ತರು ಆಕ್ರೋಶಗೊಂಡಿದ್ದಾರೆ. ಶಬರಿಮಲೆ ಪ್ರವೇಶ ಮುನ್ನ ಎರಡು ಬಾರಿ ಕೋವಿಡ್ ಟೆಸ್ಟ್ ನಿಯಮ ರೂಪಿಸಿರುವ ಪಿಣರಾಯಿ ಸರ್ಕಾರದ ವಿರುದ್ಧ ಈಗ ಕರಾವಳಿಯಲ್ಲಿ ಭವನಂ ಸನ್ನಿಧಾನಂ ಅಭಿಯಾನ ಶುರುವಾಗಿದೆ.

ಜಿಲ್ಲೆಯಿಂದ ಪ್ರತಿವರ್ಷ 70 ಸಾವಿರಕ್ಕಿಂತಲೂ ಹೆಚ್ಚು ಮಂದಿ ಕೇರಳದ ಶಬರಿಮಲೆಗೆ ಧಾರ್ಮಿಕ ಯಾತ್ರೆ ಮಾಡುತ್ತಾರೆ. ಜನವರಿ ತಿಂಗಳಲ್ಲಿ ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕೆ 40 ಸಾವಿರಕ್ಕಿಂತಲೂ ಹೆಚ್ಚು ಭಕ್ತರು ತೆರಳುತ್ತಾರೆ. ವಿಶ್ವಾದ್ಯಂತ ವ್ಯಾಪಿಸಿರುವ ಕರೋನಾ ಮಹಾಮಾರಿ ರೋಗದಿಂದ ಈ ಬಾರಿ ಶಬರಿಮಲೆ ಪ್ರವೇಶ ಕಷ್ಟಕರವಾಗಿದೆ. ಕೇರಳ ಸರ್ಕಾರ ಲೆಕ್ಕಕ್ಕಿಂತ ಹೆಚ್ಚು ನಿಯಮಾವಳಿಗಳನ್ನು ವಿಧಿಸಿದೆ. ಕರ್ನಾಟಕದಿಂದ ತೆರಳುವ ಭಕ್ತರು ಕೋವಿಡ್ ಟೆಸ್ಟ್ ಮಾಡಿರಬೇಕು. ನೀಲಕಲ್ ಎಂಬಲ್ಲಿ ಇನ್ನೊಂದು ಕೋವಿಡ್ ಟೆಸ್ಟ್ ಮಾಡಿಸಬೇಕು. ಪಂಪಾ ನದಿ ತೀರದಲ್ಲಿ ಮತ್ತೊಂದು ಬಾರಿ ಟೆಸ್ಟ್ ಮಾಡಿಸಬೇಕು ಎಂದಿದೆ. ಈ ದುಬಾರಿ ನಿಯಮ ಉಡುಪಿಯ ಅಯ್ಯಪ್ಪ ಭಕ್ತರನ್ನ ಕೆರಳಿಸಿದೆ.

ಇಷ್ಟೆಲ್ಲಾ ನಿಯಮಾವಳಿಯ ಸಹವಾಸವೇ ಬೇಡ ಅಂತ ಪಂದಳಕಂದನ ಸನ್ನಿಧಾನಕ್ಕೆ ತೆರಳದೆ ‘ಭವನಂ ಸನ್ನಿಧಾನಂ’ ಅಭಿಯಾನವನ್ನು ಉಡುಪಿಯಲ್ಲಿ ಶುರುಮಾಡಿದ್ದಾರೆ. ಈ ಅಭಿಯಾನದ ಪ್ರಕಾರ ಮನೆಯಲ್ಲೇ ಇದ್ದು ಕುಟುಂಬ ಸಮೇತ ಅಯ್ಯಪ್ಪ ಆರಾಧನೆ ಮಾಡಲು ನಿರ್ಧರಿಸಿದ್ದಾರೆ. ಎರಡೆರಡು ಕೋವಿಡ್ ಟೆಸ್ಟ್ ಮಾಡಲಿರುವ, ಇರುಮುಡಿ ವಾಪಾಸ್ ಕೊಡದ, ಭಕ್ತರ ತುಪ್ಪ ಸ್ವೀಕರಿಸದ, ಊಟ ಹಾಗೂ ತಂಗಲು ವ್ಯವಸ್ಥೆ ಮಾಡದ ದೇಗಲ ಆಡಳಿತ ಮಂಡಳಿ, ಕೇರಳ ಸರಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಯೊಂದಿಗೆ ಕೇರಳ ಸರ್ಕಾರ ಚೆಲ್ಲಾಟವಾಡುತ್ತಿದೆ. ಮೂರು ಮೂರು ಬಾರಿ ಕೋವಿಡ್ ಟೆಸ್ಟ್ ಮಾಡುವ ಅವಶ್ಯಕತೆ ಏನಿದೆ ಎಂದು ಅಯ್ಯಪ್ಪ ಭಕ್ತರು ಅಯ್ಯಪ್ಪ ಮಂದಿರಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ಆಕ್ರೋಶದ ಫಲವೇ ಇದೀಗ ಉಡುಪಿ ಜಿಲ್ಲೆಯ ಅಯ್ಯಪ್ಪ ಮಾಲಾಧಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯ ಲಕ್ಷಾಂತರ ಅಯ್ಯಪ್ಪ ಭಕ್ತರು ಭವನಂ ಸನ್ನಿಧಾನಂ ಅಭಿಯಾನದ ಜೊತೆ ಕೈಜೋಡಿಸಿ ಅಯ್ಯಪ್ಪ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸುವುದು ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ನಡೆಸುವುದು. ಯಾವುದೇ ಶಿಬಿರಗಳನ್ನು ಮಾಡದೆ ಮನೆಗಳಲ್ಲೇ ಅಯ್ಯಪ್ಪ ದೇವರನ್ನ ಕುಟುಂಬ ಸಮೇತವಾಗಿ ನಿಯಮ ನಿಷ್ಠೆಯಿಂದ ಆರಾಧಿಸಲು ತೀರ್ಮಾನಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago