Featured

ಕರಾವಳಿಯಲ್ಲಿ ಇಂದಿನಿಂದ ಕೋವಿಡ್‌ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ – Vishwanews24

ಕರಾವಳಿಯಲ್ಲಿ ಇಂದಿನಿಂದ ಕೋವಿಡ್‌ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ – Vishwanews24

ಮಂಗಳೂರು: ಕರಾವಳಿಯಲ್ಲಿ ಇಂದಿನಿಂದ ಕೋವಿಡ್‌ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ ದೊರಕಿದೆ. ವೆನ್ಲಾಕ್ ನ ಆಯುಷ್ ವಿಭಾಗದಲ್ಲಿ ಜ.10ರ ಸೋಮವಾರ ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮುನ್ನೆಚ್ಚರಿಕಾ ಡೋಸ್ ವಿತರಣೆಗೆ ಚಾಲನೆ ನೀಡಿದರು.

ಲಸಿಕೆ ಪಡೆದ ಅರ್ಹರಿಗೆ ಇದೇ ವೇಳೆ ಸಚಿವರು ಗುಲಾಬಿ ಹೂವು ನೀಡಿ ಅಭಿನಂದಿಸಿದರು.

ಬೂಸ್ಟರ್ ಡೋಸ್ ಲಸಿಕಾಕರಣದ ಅಂಗವಾಗಿ ಆರೋಗ್ಯ ಸಿಬ್ಬಂದಿ, ಕೋವಿಡ್ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ವೃದ್ದರು ಮುನ್ನೆಚರಿಕಾ ಡೋಸ್ ಲಸಿಕಾಕರಣದಲ್ಲಿ ಭಾಗಿಯಾಗಿ ಲಸಿಕೆಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ದ.ಕ ಜಿಲ್ಲೆಯಲ್ಲಿ 3,37,447 ಫಲಾನುಭವಿಗಳಿಗೆ ಲಸಿಕೆ ನಿಡುವ ಗುರಿ ಇರಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 52,523 ಆರೋಗ್ಯ ಕಾರ್ಯಕರ್ತರು ಹಾಗೂ 15,924 ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ 2,69,000 ಮಂದಿ ಫಲಾನುಭವಿಗಳಿದ್ದಾರೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

10 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

10 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

10 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

13 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

1 day ago